ಹಾಯ್ಕೆಗಳು

೧. ಒಣಧೂಳಿನ ಕವಲುದಾರಿಯಲ್ಲಿ
ನಿಂತಿದ್ದೆ ತಿಳಿಯದೇ ಸುತ್ತಿ ಎದ್ದು ಬಿದ್ದು
ಸಂಕಟದ ಸುಳಿಯಲಿ ತಬ್ಬಿಬ್ಬು ಅವನು
ಎಂದು ಬಂದನೋ ಬಾರನೋ ಒಂದೂ ತಿಳಿಯದೆ.

೨. ಒಂದು ದಾರಿಯಲಿ ನಡೆದ ಅಕ್ಕನಂತೆ
ಮನ್ನಿಸು ಪ್ರಭುವೇ ಕಾಲುದಾರಿ ಕಾಡುದಾರಿ ಆಗಿ
ಗುಡ್ಡ ಬೆಟ್ಟ ಕಣಿವೆ ಝರಿ ಇಲ್ಲದೇ ಕಳೆದು
ಹೋಗಿವೆ ಕನಸುಗಳೆಲ್ಲವೂ ಎಂದೂ ಸಿಗದಂತೆ.

೩. ಅಲ್ಲಿ ಇಲ್ಲಿ ಎಲ್ಲೆಲ್ಲೂ ಹುಡುಕಿ ಹಳವಂಡ
ರುಚ‌ಇಲ್ಲ ಸಿಹಿ‌ಇಲ್ಲ ಬರೀ ಚಪ್ಪೇ ಸೀಬೆ
ಹಸಿರು ಕೋಗಿಲೆ ಗಿಳಿ ಇಲ್ಲದ ಬಯಲುದಾರಿ
ಹರಡಿದೆ ಉರಿಬಿಸಿಲು ಬೆಳದಿಂಗಳೆಂದೂ ಕಾಣದಂತೆ.

೪. ಮಳೆ ಚಳಿ ಹನಿ ಇಬ್ಬನಿ ಇಲ್ಲದೇ ಗದ್ದೇ
ಹೊಲದ ಹುಡಿ ಮಣ್ಣಿನ ಕಡುವಾಸನೆಗೆ
ಎದೆತೆರೆದು ಅಲೆಯುತ್ತಿದ್ದೇನೆ ಜೋಗತಿಯಾಗಿ
ಮಾತುಗಳು ಗದ್ದಲ ಎಬ್ಬಿಸಿವೆ ಮೌನ ಧ್ಯಾನದಲಿ ಕಂತಿದೆ.

೫. ದುಃಖ ಮಾನ ಸಾವು ನೋವುಗಳ
ಹೆರಿಗೆ ಮನೆ ಹಾಲು ವಾಸನೆಗೆ ಒಡೆದಮನ
ಕೊನೆಗೂ ಅರ್ಥವಾಗಲಿಲ್ಲ ಪಟ್ಟು ಬಿಡದ ಬದುಕು
ಚಿಗುರು, ಕಾಳು ಮೊಳಕೆಯ ಮೂಕ ಮರ್ಮರವ.

೬. ರೋಗದಲಿ ಮಾಗಿದ ದೇಹ ತುಂಡು ಬಟ್ಟೆ
ಬಯಲು ದಾರಿಯ ಹಾಲು ಬೆಳಕು ಕಡಲು
ಎದೆಯ ಹಾಡು ಇಳಿದಿಳಿದು ಜೀವಜಲ
ನದಿ ಹರಿದು ಬಯಲು ಪೊರೆದ ಹರವಿನ ದಾಂಪತ್ಯ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾತ್ರಿ
Next post ಚುಂಬನ

ಸಣ್ಣ ಕತೆ

  • ಒಂದು ಹಿಡಿ ಪ್ರೀತಿ

    ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ವ್ಯವಸ್ಥೆ

    ಮಗಳ ಮದುವೆ ಪಿಕ್ಸ್ ಆಗಿದ್ದರಿಂದ ದೊಡ್ಡ ತಲೆ ಭಾರ ಇಳಿದಂತಾಗಿತ್ತು. ಮದುವೆ ಮುಂದಿನ ತಿಂಗಳ ಕೊನೆಯ ವಾರವೆಂದು ದಿನಾಂಕವನ್ನೂ ನಿಗದಿಪಡಿಸಲಾಗಿತ್ತು. ಗಂಡಿನವರ ತರಾತುರಿಗೆ ಒಪ್ಪಲೇಬೇಕಾದ ಪರಿಸ್ಥಿತಿ ನನ್ನದು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…