Home / ಕವನ / ಹಾಯ್ಕು / ಹಾಯ್ಕೆಗಳು

ಹಾಯ್ಕೆಗಳು

೧. ಒಣಧೂಳಿನ ಕವಲುದಾರಿಯಲ್ಲಿ
ನಿಂತಿದ್ದೆ ತಿಳಿಯದೇ ಸುತ್ತಿ ಎದ್ದು ಬಿದ್ದು
ಸಂಕಟದ ಸುಳಿಯಲಿ ತಬ್ಬಿಬ್ಬು ಅವನು
ಎಂದು ಬಂದನೋ ಬಾರನೋ ಒಂದೂ ತಿಳಿಯದೆ.

೨. ಒಂದು ದಾರಿಯಲಿ ನಡೆದ ಅಕ್ಕನಂತೆ
ಮನ್ನಿಸು ಪ್ರಭುವೇ ಕಾಲುದಾರಿ ಕಾಡುದಾರಿ ಆಗಿ
ಗುಡ್ಡ ಬೆಟ್ಟ ಕಣಿವೆ ಝರಿ ಇಲ್ಲದೇ ಕಳೆದು
ಹೋಗಿವೆ ಕನಸುಗಳೆಲ್ಲವೂ ಎಂದೂ ಸಿಗದಂತೆ.

೩. ಅಲ್ಲಿ ಇಲ್ಲಿ ಎಲ್ಲೆಲ್ಲೂ ಹುಡುಕಿ ಹಳವಂಡ
ರುಚ‌ಇಲ್ಲ ಸಿಹಿ‌ಇಲ್ಲ ಬರೀ ಚಪ್ಪೇ ಸೀಬೆ
ಹಸಿರು ಕೋಗಿಲೆ ಗಿಳಿ ಇಲ್ಲದ ಬಯಲುದಾರಿ
ಹರಡಿದೆ ಉರಿಬಿಸಿಲು ಬೆಳದಿಂಗಳೆಂದೂ ಕಾಣದಂತೆ.

೪. ಮಳೆ ಚಳಿ ಹನಿ ಇಬ್ಬನಿ ಇಲ್ಲದೇ ಗದ್ದೇ
ಹೊಲದ ಹುಡಿ ಮಣ್ಣಿನ ಕಡುವಾಸನೆಗೆ
ಎದೆತೆರೆದು ಅಲೆಯುತ್ತಿದ್ದೇನೆ ಜೋಗತಿಯಾಗಿ
ಮಾತುಗಳು ಗದ್ದಲ ಎಬ್ಬಿಸಿವೆ ಮೌನ ಧ್ಯಾನದಲಿ ಕಂತಿದೆ.

೫. ದುಃಖ ಮಾನ ಸಾವು ನೋವುಗಳ
ಹೆರಿಗೆ ಮನೆ ಹಾಲು ವಾಸನೆಗೆ ಒಡೆದಮನ
ಕೊನೆಗೂ ಅರ್ಥವಾಗಲಿಲ್ಲ ಪಟ್ಟು ಬಿಡದ ಬದುಕು
ಚಿಗುರು, ಕಾಳು ಮೊಳಕೆಯ ಮೂಕ ಮರ್ಮರವ.

೬. ರೋಗದಲಿ ಮಾಗಿದ ದೇಹ ತುಂಡು ಬಟ್ಟೆ
ಬಯಲು ದಾರಿಯ ಹಾಲು ಬೆಳಕು ಕಡಲು
ಎದೆಯ ಹಾಡು ಇಳಿದಿಳಿದು ಜೀವಜಲ
ನದಿ ಹರಿದು ಬಯಲು ಪೊರೆದ ಹರವಿನ ದಾಂಪತ್ಯ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...