ದೀಪಾವಳಿ

ನಿನ್ನ ನೆನಪಿನ ಬತ್ತಿ ಹೊಸೆದು
ಹೊಸೆದು ಎದೆಯ ಹಾಲೆರೆದು
ಪಣತಿಯ ಹಚ್ಚಿಟ್ಟೆ ಕಾರ್ತೀಕದ
ಇರುಳ ಸಂಜೆಯ ಮರುಳಭಾವಕೆ.

ಬಾ ನೀನು ಬೆಳಕಿನ ಗೆರೆಗುಂಟ
ಮಾಡಿನ ಕದವ ತೆರೆದು ತೇಜ
ತುಂಬಿದ ಹಾಸುಬೀಸು ಜೀವ
ಜೀವದ ಬೆಸುಗೆ ಪ್ರೇಮ ರಾಗಕೆ.

ಮಣ್ಣ ಕಡೆದ ಸಣ್ಣ ಮೊಳಕೆ
ಇರುಳ ತುಂಬಿ ನರಳಿ ಕಂಪ ಬೀರಿ
ಹೂವು ಅರಳು ಮೈಯ ಉಸಿರು
ಚಿಗುರಿ ತೋಯುವ ಇಬ್ಬನಿಗಳ ಸಾಲು.

ತೆರೆತೆರೆದ ಅಗಲ ಬಾಗಿಲ ತಳಿರು
ತೋರಣ ಚಿನಕುರಳಿ ಹೂ ಬಾಣ
ಕೈ ಹಿಡಿದು ಹಾಸಿದ ಬೆಳಕು ಕಳೆ
ಬೆಳಗು ಲಹರಿ ತಟ್ಟಿತಟ್ಟಿ ಹಾಡಿದ ಜೋಗುಳ.

ದೂರದಂಚಿನಲಿ ಹೂಗಳ ರಾಶಿ ಸುರಿದು
ಕನಸಿನ ಗೊನೆಗೆ ಮಿಂಚಿನ ತೆನೆ
ಮಿನುಗಿ ದಿವ್ಯ ನುಡಿಗಳ ಬಣ್ಣದ ಕಿಡಿ
ನಕ್ಕ ಕಂದನ ಹಾಲುಗಲ್ಲದ ಬೆಳಕು ತಾಯಕಣ್ಣ ಬಿಂಬ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗುಟ್ಟು ರಟ್ಟು
Next post ಮೊದಲ ರಾತ್ರಿ

ಸಣ್ಣ ಕತೆ

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ನೆಮ್ಮದಿ

    ಅವನಿಗೆ ನೆಮ್ಮದಿ ಬೇಕಿತ್ತು. ಆ ಜನನಿಬಿಡ ರಸ್ತೆಯ ಪಕ್ಕದಲ್ಲಿರುವ ನ್ಯೂಸ್ ಪೇಪರ್ ಸ್ಟಾಲಿಗೆ ತಾಗಿ ನಿಂತು ಅವನು ರಸ್ತೆಯನ್ನು ವೀಕ್ಷಿಸುತ್ತಿದ್ದ. ಸೂರ್‍ಯೋದಯವಾಗಿ ಕೆಲವೇ ಗಂಟೆಗಳಾಗಿರಬಹುದು. ಜಾತ್ರೆಗೆ ಸೇರಿದಂತೆ… Read more…

  • ಉಧೋ ಉಧೋ

    ಸಂತ್ರಸ್ತರ ಆ ಶೆಡ್ಡಿಗೆ ನಾಗವ್ವನ ಕುಟುಂಬ ಸ್ಥಳಾಂತರವಾಗಿ ಆರು ತಿಂಗಳಾಗಿತ್ತು. ನಾಲ್ಕಂಕಣದ ದಂಧಕ್ಕಿ ಮನಿ ಸಾರಿಸಿ ಪಡಿ ಹಿಟ್ಟಿನ ರೊಟ್ಟಿತಟ್ಟಿ ತಣ್ಣಗ ಮುಂದಿನ ಬಂಕಕ್ಕೆ ಕುಬಸ ಬಿಚ್ಚಿ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…