Home / ಕವನ / ಕವಿತೆ / ಯಶೋಧೆ ಕಂದ

ಯಶೋಧೆ ಕಂದ

ಯಶೋಧೆ ಕಂದ ಕೃಷ್ಣನಿಗೆ
ಹೇಳುತ್ತಿದ್ದಳು ಪುಟ್ಟ ಹತ್ತ ಬೇಡ
ಯದುಗಿರಿಯ ಬೆಟ್ಟ ಅದರ ಮೇಲೆ
ಕೂಡಲಿ ಹಾಯಾಗಿ ಬಣ್ಣ ಬಣ್ಣದ ಹಕ್ಕಿಗಳು
ಹಾಡಲಿ ಜೀವ ರಾಗಗಳ.

ಕಂದ ನೀನು ಅಲ್ಲಿ ಸುಳಿದಾಡಬೇಡ
ತೇಲಲಿ ಮೋಡಗಳು ಸುರಿಯಲಿ
ತಂಪು ನಿಶ್ಯಬ್ದಗಳ ಗುಂಗು ಹಿಡಿದು
ಹೂಗಳು ಕಂಪು ಸೂಸಲು ಎದೆ ಆಳಕೆ
ಹರಿಯಲಿ ಭಾವನದಿ.

ಕಂದ ತಕತಕ ಕುಣಿಯಬೇಡ
ಬೆಟ್ಟದ ತಪ್ಪಲಲ್ಲಿ ಹಸಿರು ಹಾಸಿದ
ಬಯಲಲಿ ನರ್ತಿಸಲಿ ನಿನ್ನ ಪ್ರೀತಿಯ ನವಿಲು
ಗರಿಗೆದರಿ ಬಾಚಿ ತಬ್ಬಿಕೊಳ್ಳಲು ಇಂಚರದ ಹಕ್ಕಿಗಳು
ಹುಟ್ಟಲಿ ಸಾಕ್ಷಿಗಳು.

ಪುಟ್ಟ ಹತ್ತ ಬೇಡ ಎತ್ತರದ ಬಂಡೆಗಳು
ಗಿಲಿ ಗಿಲಿ ಗೆಜ್ಜೆಯ ಗೋಪಿಯರು
ನರ್ತಿಸಲಿ ಸರಿದು ಹೋಗುವ
ಮೋಡಗಳ ಜೊತೆಗೂಡಿ ಖುಷಿಯಲಿ ಅರಳಲಿ
ಅಮರ ಪ್ರೇಮ ಕಾವ್ಯ

ಕಂದ ಕೊಳಲನೂದಬೇಡ ಬೆಟ್ಟದಲಿ
ಎಲ್ಲಾ ರಾಗಗಳು ನದಿಯಾಗಿ ಹರಿದು
ಎದೆಯ ಬಯಲ ತುಂಬಾ ಪ್ರೀತಿ
ಅಲೆಗಳು ಕೃಷ್ಣ ಕೃಷ್ಣ ಎಂದು ಅಪ್ಪಳಿಸಲಿ
ಅದು ನೀನು ಜಗದ್ದೋಧಾರಕ ಯಶೋದೆ
ಕಂದ ಕೃಷ್ಣ ಎಂದೆಂದೂ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...