Home / ಕವನ / ಕವಿತೆ / ಯಶೋಧೆ ಕಂದ

ಯಶೋಧೆ ಕಂದ

ಯಶೋಧೆ ಕಂದ ಕೃಷ್ಣನಿಗೆ
ಹೇಳುತ್ತಿದ್ದಳು ಪುಟ್ಟ ಹತ್ತ ಬೇಡ
ಯದುಗಿರಿಯ ಬೆಟ್ಟ ಅದರ ಮೇಲೆ
ಕೂಡಲಿ ಹಾಯಾಗಿ ಬಣ್ಣ ಬಣ್ಣದ ಹಕ್ಕಿಗಳು
ಹಾಡಲಿ ಜೀವ ರಾಗಗಳ.

ಕಂದ ನೀನು ಅಲ್ಲಿ ಸುಳಿದಾಡಬೇಡ
ತೇಲಲಿ ಮೋಡಗಳು ಸುರಿಯಲಿ
ತಂಪು ನಿಶ್ಯಬ್ದಗಳ ಗುಂಗು ಹಿಡಿದು
ಹೂಗಳು ಕಂಪು ಸೂಸಲು ಎದೆ ಆಳಕೆ
ಹರಿಯಲಿ ಭಾವನದಿ.

ಕಂದ ತಕತಕ ಕುಣಿಯಬೇಡ
ಬೆಟ್ಟದ ತಪ್ಪಲಲ್ಲಿ ಹಸಿರು ಹಾಸಿದ
ಬಯಲಲಿ ನರ್ತಿಸಲಿ ನಿನ್ನ ಪ್ರೀತಿಯ ನವಿಲು
ಗರಿಗೆದರಿ ಬಾಚಿ ತಬ್ಬಿಕೊಳ್ಳಲು ಇಂಚರದ ಹಕ್ಕಿಗಳು
ಹುಟ್ಟಲಿ ಸಾಕ್ಷಿಗಳು.

ಪುಟ್ಟ ಹತ್ತ ಬೇಡ ಎತ್ತರದ ಬಂಡೆಗಳು
ಗಿಲಿ ಗಿಲಿ ಗೆಜ್ಜೆಯ ಗೋಪಿಯರು
ನರ್ತಿಸಲಿ ಸರಿದು ಹೋಗುವ
ಮೋಡಗಳ ಜೊತೆಗೂಡಿ ಖುಷಿಯಲಿ ಅರಳಲಿ
ಅಮರ ಪ್ರೇಮ ಕಾವ್ಯ

ಕಂದ ಕೊಳಲನೂದಬೇಡ ಬೆಟ್ಟದಲಿ
ಎಲ್ಲಾ ರಾಗಗಳು ನದಿಯಾಗಿ ಹರಿದು
ಎದೆಯ ಬಯಲ ತುಂಬಾ ಪ್ರೀತಿ
ಅಲೆಗಳು ಕೃಷ್ಣ ಕೃಷ್ಣ ಎಂದು ಅಪ್ಪಳಿಸಲಿ
ಅದು ನೀನು ಜಗದ್ದೋಧಾರಕ ಯಶೋದೆ
ಕಂದ ಕೃಷ್ಣ ಎಂದೆಂದೂ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...