Home / ಕವನ / ಕವಿತೆ / ಯಶೋಧೆ ಕಂದ

ಯಶೋಧೆ ಕಂದ

ಯಶೋಧೆ ಕಂದ ಕೃಷ್ಣನಿಗೆ
ಹೇಳುತ್ತಿದ್ದಳು ಪುಟ್ಟ ಹತ್ತ ಬೇಡ
ಯದುಗಿರಿಯ ಬೆಟ್ಟ ಅದರ ಮೇಲೆ
ಕೂಡಲಿ ಹಾಯಾಗಿ ಬಣ್ಣ ಬಣ್ಣದ ಹಕ್ಕಿಗಳು
ಹಾಡಲಿ ಜೀವ ರಾಗಗಳ.

ಕಂದ ನೀನು ಅಲ್ಲಿ ಸುಳಿದಾಡಬೇಡ
ತೇಲಲಿ ಮೋಡಗಳು ಸುರಿಯಲಿ
ತಂಪು ನಿಶ್ಯಬ್ದಗಳ ಗುಂಗು ಹಿಡಿದು
ಹೂಗಳು ಕಂಪು ಸೂಸಲು ಎದೆ ಆಳಕೆ
ಹರಿಯಲಿ ಭಾವನದಿ.

ಕಂದ ತಕತಕ ಕುಣಿಯಬೇಡ
ಬೆಟ್ಟದ ತಪ್ಪಲಲ್ಲಿ ಹಸಿರು ಹಾಸಿದ
ಬಯಲಲಿ ನರ್ತಿಸಲಿ ನಿನ್ನ ಪ್ರೀತಿಯ ನವಿಲು
ಗರಿಗೆದರಿ ಬಾಚಿ ತಬ್ಬಿಕೊಳ್ಳಲು ಇಂಚರದ ಹಕ್ಕಿಗಳು
ಹುಟ್ಟಲಿ ಸಾಕ್ಷಿಗಳು.

ಪುಟ್ಟ ಹತ್ತ ಬೇಡ ಎತ್ತರದ ಬಂಡೆಗಳು
ಗಿಲಿ ಗಿಲಿ ಗೆಜ್ಜೆಯ ಗೋಪಿಯರು
ನರ್ತಿಸಲಿ ಸರಿದು ಹೋಗುವ
ಮೋಡಗಳ ಜೊತೆಗೂಡಿ ಖುಷಿಯಲಿ ಅರಳಲಿ
ಅಮರ ಪ್ರೇಮ ಕಾವ್ಯ

ಕಂದ ಕೊಳಲನೂದಬೇಡ ಬೆಟ್ಟದಲಿ
ಎಲ್ಲಾ ರಾಗಗಳು ನದಿಯಾಗಿ ಹರಿದು
ಎದೆಯ ಬಯಲ ತುಂಬಾ ಪ್ರೀತಿ
ಅಲೆಗಳು ಕೃಷ್ಣ ಕೃಷ್ಣ ಎಂದು ಅಪ್ಪಳಿಸಲಿ
ಅದು ನೀನು ಜಗದ್ದೋಧಾರಕ ಯಶೋದೆ
ಕಂದ ಕೃಷ್ಣ ಎಂದೆಂದೂ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...