Home / ಲೇಖನ / ಇತರೆ / ನಂಬಿಕೆಯೇ ದೇವರು

ನಂಬಿಕೆಯೇ ದೇವರು

ದೇವರು ಮತ್ತು ಒಬ್ಬ ಮನುಷ್ಯನ ನಡುವೆ ನಡೆದ ಸ್ವಾರಸ್ಯಕರ ಹಾಗೂ ಅರ್ಥಪೂರ್ಣ ಸಂಭಾಷಣೆ.

ಮನುಷ್ಯ:- “ನಿನಗೊಂದು ಪ್ರಶ್ನೆ ಕೇಳಲೇ?”
ದೇವರು:- ” ಕೇಳು”
ಮನುಷ್ಯ:-“ಇಂದು ನಾನಂದುಕೊಂಡ ಯಾವ ಕೆಲಸಗಳು ನಡೆಯಲಿಲ್ಲ ಏಕೆ?”
ದೇವರು:-“ನಿನ್ನ ಪ್ರಶ್ನೆಗಳನ್ನು ನಿಖರವಾಗಿ ಕೇಳು?”
ಮನುಷ್ಯ:-“ಬೆಳಗ್ಗೆ ಬೇಗ ಎಚ್ಚರವಾಗಲಿಲ್ಲ. ಕಾರುಸ್ಟಾರ್ಟ್ ಆಗಲು ಬಹಳ ತಡವಾಯಿತು. ಮಧ್ಯಾಹ್ನದ ಊಟದ ಡಬ್ಬಿ ಬದಲಾಗಿ, ತೊಂದರೆಯಾಯಿತು. ಸಂಜೆ ಮೊಬೈಲ್ ಕಾಲ್ ರಿಸೀವ್ ಮಾಡುತ್ತಿದ್ದಂತೆ ಹ್ಯಾಂಗ್ ಆಗಿ, ಡೆಡ್ ಆಯಿತು. ಮನೆಗೆ ಬಂದು ಕಾಲು ನೋವು ಪರಿಹರಿಸಿಕೊಳ್ಳಲು ಫುಟ್ ಮಸಾಜರ್ ನಲ್ಲಿ ಕಾಲಿಡುತ್ತಿದ್ದಂತೆ ಅದು ಕೆಟ್ಟು ನಿಂತಿತು. ಇಂದಿನ ಎಲ್ಲ ಕೆಲಸಗಳಲ್ಲೂ ವಿಘ್ನ ಹಾಗೂ ಆತಂಕಗಳು ಕಾಡಿದವು ಏಕೆ?”
ದೇವರು:-“ಬೆಳಗ್ಗೆ ನಿನ್ನ ಜೀವಹರಣ ಮಾಡಲು ಮೃತ್ಯದೂತನೊಬ್ಬ ನಿನ್ನ ಹಾಸಿಗೆ ಬದಿಯಲ್ಲಿಕಾಯುತ್ತಿದ್ದ. ಅವನೊಂದಿಗೆ ಹೋರಾಡಿ ನಿಮ್ಮಜೀವ ಕಾಪಾಡಲು ದೇವದೂತನೊಬ್ಬನನ್ನು ಕಳುಹಿಸಿದ್ದೆ. ಇದು ನಿನಗೆ ಗೊತ್ತಾಗದಂತೆ ಹೆಚ್ಚು ಹೊತ್ತು ನಿದ್ದೆ ಮಾಡುವಂತೆ ಮಾಡಿದೆ.
ನೀನು ಸಂಚರಿಸುವ ದಾರಿಯಲ್ಲಿ ಕುಡಿದಮತ್ತಿನಲ್ಲಿ ಚಾಲಕನೊಬ್ಬ ಡ್ರೈವಿಂಗ್ ಮಾಡಿಕೊಂಡು ಬರುತ್ತಿದ್ದ, ಅವನಿಂದ ನಿನಗೆ ಅಪಘಾತವಾಗದಿರಲಿ ಎಂದು ನಿನ್ನ ಕಾರು ತಡವಾಗಿ ಸ್ಟಾರ್ಟ್ ಆಗುವಂತೆ ಮಾಡಿದೆ.
ನಿನಗೆ ಅಡುಗೆ ಮಾಡಿಕೊಡುತ್ತಿದ್ದ, ಬಾಣಸಿಗ ರೋಗಪೀಡಿತನಾಗಿದ್ದ. ಆತನ ರೋಗ ನಿನಗೆ ಹರಡದಂತೆ ಮಾಡಲು ನಿನ್ನ ಊಟದ ಡಬ್ಬ ಬದಲಿಸಿದೆ. ಸಂಜೆ ನಿನ್ನ ಸ್ನೇಹಿತ ನಿನಗೆ ಕರೆ ಮಾಡಿ, ಸುಳ್ಳು ಸಾಕ್ಷಿ ಹೇಳಲು ಒಪ್ಪಿಸಲು ಬಯಸಿದ್ದ, ಅದಕ್ಕಾಗಿ ನಿನ್ನ ಮೊಬೈಲ್ ಹ್ಯಾಂಗ್ ಆಗುವಂತೆ ಮಾಡಿದೆ.
ನಿನ್ನ ಮನೆಯಲ್ಲಿದ್ದ ಫುಟ್ ಮಸಾಜರ್ನಲ್ಲಿ ನೀರು ಸೇರಿಕೊಂಡು ಶಾರ್ಟ್ ಆಗಿತ್ತು. ಅದು ಕಾರ್ಯ ನಿರ್ವಹಿಸಿದ್ದರೆ, ನಿನಗೆ ವಿದ್ಯುತ್ ಶಾಕ್ ತಗಲುವ ಸಾಧ್ಯತೆ ಇತ್ತು. ಅದಕ್ಕಾಗಿ ನಾನು, ಫುಟ್ ಮಸಾಜರ್ ಕಾರ್ಯನಿರ್ವಹಿಸದಂತೆ ನಿಷ್ಕ್ರಿಯೆಗೊಳಿಸಿದೆ.”
ಮನುಷ್ಯ:-” ಕ್ಷಮಿಸಿ, ನಿಮ್ಮನ್ನು ತಪ್ಪಾಗಿ ಅರ್ಥೈಯಿಸಿಕೊಂಡಿದ್ದೆ.”
ದೇವರು:-“ನೀನು ಮಾಡುವ ಯೋಜನೆಗಳಿಗಿಂತ ನಾನು ಮಾಡುವ ಯೋಜನೆಗಳು ನಿನ್ನ ಬದುಕಿಗೆ ಉತ್ತಮ ಫಲಿತಾಂಶಗಳನ್ನುನೀಡುತ್ತವೆ. ನೀನು ಮಾಡಿದ ಯೋಜನೆಗಳು ವಿಫಲವಾಯಿತೆಂದು ಬೇಸರವಾಗಬೇಡ.”
ಮನುಷ್ಯ :-“ಧನ್ಯವಾದಗಳು ಪ್ರಭುವೆ?”
ದೇವರು:-“ಎಲ್ಲ ಜೀವಿಗಳು ನನ್ನ ಮಕ್ಕಳು. ಅವರ ಒಳಿತಿನ ಬಗ್ಗೆ ಮಾತ್ರ ನಾನು ಚಿಂತಿಸುತ್ತೇನೆ. ನಾನು ಮಾಡಿದ ಯೋಜನೆಗಳಿಂದ ಎಂದಿಗೂ ಕೆಡಕಾಗುವುದಿಲ್ಲ. ಮನುಷ್ಯರಿಗಾಗಿ ನಾನು ಕೆಲವು ಪ್ರಶ್ನೆಗಳನ್ನು ಕೇಳುತ್ತೇನೆ, ನಿಧಾನವಾಗಿ ಯೋಚಿಸಿ ನನಗೆ ಉತ್ತರಿಸಿ.”

ನಿಮಗೆ, ಮೂರು ಗಂಟೆಯ ಸಿನಿಮಾ ಅಥವಾ ಮನರಂಜನೆ ಕಾರ್ಯಕ್ರಮ ನೋಡುವಾಗ ಏಕಾಗ್ರತೆ ಇರುತ್ತದೆ. ಆದರೆ, ೧೦ ನಿಮಿಷದ ಪ್ರಾರ್ಥನೆಗೆ ಏಕಾಗ್ರತೆ ಇರಲಿ ಸಮಯವೂ ಇರುವುದಿಲ್ಲ ಏಕೆ?

ಮನರಂಜನೆ ಹಾಗೂ ಹೋಟೆಲ್, ಪಾರ್ಲರ್, ಮೊಬೈಲ್ & ಬಾರ್ ಗಳಲ್ಲಿ ಕಳೆಯುವ ಸಮಯಕ್ಕಿಂತ ಪ್ರಾರ್ಥನೆಗಾಗಿ ನೀಡುವ ಸಮಯ ಕಿರಿದಾಗಿರುತ್ತದೆ ಏಕೆ?

ಸಾವಿರಾರು ಪುಟಗಳಿರುವ ಕಥೆ ಕಾದಂಬರಿಗಳನ್ನು ಏಕಕಾಲದಲ್ಲಿ ಓದಿ ಮುಗಿಸುವ ಸಾಮರ್ಥ್ಯ ನಿಮ್ಮದಾಗಿದ್ದರೂ, ಧಾರ್ಮಿಕ ಗ್ರಂಥಗಳನ್ನು ಓದುವ ತಾಳ್ಮೆ ಇರುವುದಿಲ್ಲ ಏಕೆ?

ದೇವರೊಂದಿಗೆ ಎಂದರೆ, ನಿಮ್ಮ ಮನಸಾಕ್ಷಿಯೊಂದಿಗೆ ಮಾತನಾಡುವ ವ್ಯವಧಾನ ಕ್ಷೀಣಿಸುತ್ತಿದೆ ಏಕೆ?

ಈ ಪ್ರಶ್ನೆಗಳಿಗೆ ಉತ್ತರ ದೊರೆತರೆ, ನೀವು ನಿಮ್ಮ ಮನಸಾಕ್ಷಿಯೊಂದಿಗೆ ಉತ್ತಮವಾದ ಸಂವಾದಿಸುವ ಶಕ್ತಿ ಹೊಂದಿದ್ದೀರಿ ಹಾಗೂ ದೇವರು ನಿಮ್ಮೊಂದಿಗೆ ಸದಾ ಇರುತ್ತಾನೆ ಎಂದರ್ಥ.

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...