Home / ಕವನ / ಕವಿತೆ / ನಗುವಿತ್ತು ಹೂವಂತ ಮಾತಿತ್ತು

ನಗುವಿತ್ತು ಹೂವಂತ ಮಾತಿತ್ತು

ಹಠಾತ್ತಾಗಿ ಬಂದ ಚಡಪಡಿಕೆ
ಅದ್ಹೇಕೋ ನಿನ್ನ ಪಾದಗಳು
ಒಮ್ಮೆಲೆ ನೆನಪಾದವು
ಪಾದಗಳ ಬಳಿ ಕುಳಿತು
ಸರಿರಾತ್ರಿ ಧ್ಯಾನಿಸಿದ ನೆನಪು

ಇಡೀ ದೇಹವನ್ನು ಉಂಡ ಮೇಲೆ
ಉಳಿದದ್ದೇನು??
ತೃಪ್ತಿಯಿಂದ ಅಪ್ಪಿ ಮಲಗುವುದಷ್ಟೇ
ಕನಸು ನನಸು ಬೀಜ ಮೊರೆತದ
ಜೀವ ಮಿಡಿತದ ಸದ್ದು
ಕಿವಿಗೆ ಮಾತಾಡಿ ತೆರಳಿತು

ಪಾದಗಳ ಬಳಿ ಕುಳಿತು ಧ್ಯಾನಿಸಿದೆ
ಮಗು ಪುಟ್ಟು ಕಾಲುಗಳಿಂದ
ಹಿತವಾಗಿ ಮುಖಕ್ಕೆ ಒದೆಯುತ್ತಿತ್ತು ಕಿಲಕಿಲ
ನಗುತ್ತಿತ್ತು ,ಭೂಮಿ ಮಳೆಮಿಂದು ನಕ್ಕಂತೆ

ಮಗು ತನ್ನ ಮುಖದಲ್ಲಿ
ನನಗೆ ಕನ್ನಡಿ ಹಿಡಿದಿತ್ತು
ಪಾದಗಳ‌ ಬಳಿ ಕುಳಿತು ಶರಣಾದೆ

ಬೆಳಗೊಳದ ಬಾಹುಬಲಿ
ಕಲ್ಲಾಗಿ ಆಕಾಶದೆತ್ತರಕೆ ಬೆಳೆದಿದ್ದ
ಅವನ ಪಾದಗಳ ಬಳಿ ನಿಂತೆ
ಕುಳಿತೆ ಧ್ಯಾನಿಸಿದೆ ಮಲಗಿದೆ

ಆಗಲೂ ನೆನಪಾದದ್ದು
ನೀನು, ಮಗುವಿನ ಒದೆತ ತಿವಿತ
ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಅದು ಸಾಮಾನ್ಯವೇನಲ್ಲ??

ಭೂಮಿ ತಾಯಿಯ ಬಳಿ ಬಂದೆ
ಹೊಲದಲ್ಲಿ ಮಲಗಿದೆ, ಸ್ವಲ್ಪ ಹೊತ್ತು ನಡೆದೆ…
ಕೈಗಳಿಂದ ಮಣ್ಣ ಸ್ಪರ್ಶಿಸಿದೆ
ಮಣ್ಣಲ್ಲಿ ಆಕೆಯ ಪಾದಗಳು ಸಿಕ್ಕವು
ಅಲ್ಲೇ ಆಕೆಯ ಧ್ವನಿ ಇತ್ತು
ಬದುಕಿತ್ತು ಒಡಲಿತ್ತು
ದಶಕಗಳ ನಂತರ ಹೊಲದ ಮುಖ ನೋಡಿದೆ
ಬಾಲ್ಯ ಮರುಕಳಿಸಿತು
ಇದೇ ಹೊಲದಲ್ಲಿ ಎತ್ತುಗಳು ದುಡಿದಿದ್ದವು, ಅಪ್ಪನ ಬೆವರಿತ್ತು ನಗುವಿತ್ತು ಹೂವಂತ ಮಾತಿತ್ತು

ಇದೇ ಹೊಲದಲ್ಲಿ ಬೆಳೆದ ನವಣೆ ಜೋಳದ ತೆನೆಯ ಜೊತೆ ಆಟವಾಡಿ, ಹಣ್ಣು ತಿಂದು ನಕ್ಕಿದ್ದೆವು ಹಸಿಗಡಲೆ ಸುಟ್ಟು ಮುಕ್ಕಿದ್ದೆವು

ಹೊಲದ ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಹುಡುಗಾಟವಲ್ಲ
ಕಳೆದು ಹೋದ ತಾಯಿ, ಯೌವ್ವನದ ಪ್ರೇಯಸಿಯ ಜೊತೆ
ನಕ್ಕಂತೆ ಬಿಕ್ಕಿದಂತೆ
ಮತ್ತೆ ನಕ್ಕು ಜಾತ್ರೆ ಮುಗಿಸಿ
ಮರಳಿ ಬದುಕಿಗೆ ನಡೆದಂತೆ…
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...