Home / ಕವನ / ಕವಿತೆ / ನಗುವಿತ್ತು ಹೂವಂತ ಮಾತಿತ್ತು

ನಗುವಿತ್ತು ಹೂವಂತ ಮಾತಿತ್ತು

ಹಠಾತ್ತಾಗಿ ಬಂದ ಚಡಪಡಿಕೆ
ಅದ್ಹೇಕೋ ನಿನ್ನ ಪಾದಗಳು
ಒಮ್ಮೆಲೆ ನೆನಪಾದವು
ಪಾದಗಳ ಬಳಿ ಕುಳಿತು
ಸರಿರಾತ್ರಿ ಧ್ಯಾನಿಸಿದ ನೆನಪು

ಇಡೀ ದೇಹವನ್ನು ಉಂಡ ಮೇಲೆ
ಉಳಿದದ್ದೇನು??
ತೃಪ್ತಿಯಿಂದ ಅಪ್ಪಿ ಮಲಗುವುದಷ್ಟೇ
ಕನಸು ನನಸು ಬೀಜ ಮೊರೆತದ
ಜೀವ ಮಿಡಿತದ ಸದ್ದು
ಕಿವಿಗೆ ಮಾತಾಡಿ ತೆರಳಿತು

ಪಾದಗಳ ಬಳಿ ಕುಳಿತು ಧ್ಯಾನಿಸಿದೆ
ಮಗು ಪುಟ್ಟು ಕಾಲುಗಳಿಂದ
ಹಿತವಾಗಿ ಮುಖಕ್ಕೆ ಒದೆಯುತ್ತಿತ್ತು ಕಿಲಕಿಲ
ನಗುತ್ತಿತ್ತು ,ಭೂಮಿ ಮಳೆಮಿಂದು ನಕ್ಕಂತೆ

ಮಗು ತನ್ನ ಮುಖದಲ್ಲಿ
ನನಗೆ ಕನ್ನಡಿ ಹಿಡಿದಿತ್ತು
ಪಾದಗಳ‌ ಬಳಿ ಕುಳಿತು ಶರಣಾದೆ

ಬೆಳಗೊಳದ ಬಾಹುಬಲಿ
ಕಲ್ಲಾಗಿ ಆಕಾಶದೆತ್ತರಕೆ ಬೆಳೆದಿದ್ದ
ಅವನ ಪಾದಗಳ ಬಳಿ ನಿಂತೆ
ಕುಳಿತೆ ಧ್ಯಾನಿಸಿದೆ ಮಲಗಿದೆ

ಆಗಲೂ ನೆನಪಾದದ್ದು
ನೀನು, ಮಗುವಿನ ಒದೆತ ತಿವಿತ
ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಅದು ಸಾಮಾನ್ಯವೇನಲ್ಲ??

ಭೂಮಿ ತಾಯಿಯ ಬಳಿ ಬಂದೆ
ಹೊಲದಲ್ಲಿ ಮಲಗಿದೆ, ಸ್ವಲ್ಪ ಹೊತ್ತು ನಡೆದೆ…
ಕೈಗಳಿಂದ ಮಣ್ಣ ಸ್ಪರ್ಶಿಸಿದೆ
ಮಣ್ಣಲ್ಲಿ ಆಕೆಯ ಪಾದಗಳು ಸಿಕ್ಕವು
ಅಲ್ಲೇ ಆಕೆಯ ಧ್ವನಿ ಇತ್ತು
ಬದುಕಿತ್ತು ಒಡಲಿತ್ತು
ದಶಕಗಳ ನಂತರ ಹೊಲದ ಮುಖ ನೋಡಿದೆ
ಬಾಲ್ಯ ಮರುಕಳಿಸಿತು
ಇದೇ ಹೊಲದಲ್ಲಿ ಎತ್ತುಗಳು ದುಡಿದಿದ್ದವು, ಅಪ್ಪನ ಬೆವರಿತ್ತು ನಗುವಿತ್ತು ಹೂವಂತ ಮಾತಿತ್ತು

ಇದೇ ಹೊಲದಲ್ಲಿ ಬೆಳೆದ ನವಣೆ ಜೋಳದ ತೆನೆಯ ಜೊತೆ ಆಟವಾಡಿ, ಹಣ್ಣು ತಿಂದು ನಕ್ಕಿದ್ದೆವು ಹಸಿಗಡಲೆ ಸುಟ್ಟು ಮುಕ್ಕಿದ್ದೆವು

ಹೊಲದ ಪಾದಗಳ ಬಳಿ ಕುಳಿತು ಧ್ಯಾನಿಸುವುದೆಂದರೆ
ಹುಡುಗಾಟವಲ್ಲ
ಕಳೆದು ಹೋದ ತಾಯಿ, ಯೌವ್ವನದ ಪ್ರೇಯಸಿಯ ಜೊತೆ
ನಕ್ಕಂತೆ ಬಿಕ್ಕಿದಂತೆ
ಮತ್ತೆ ನಕ್ಕು ಜಾತ್ರೆ ಮುಗಿಸಿ
ಮರಳಿ ಬದುಕಿಗೆ ನಡೆದಂತೆ…
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...