ನಿಶಬ್ದದ ತಂಗಾಳಿ ತಾಗಿ ಹೋಯಿತು

-೧-
ಭೂಮಿ ಮೇಲೆ
ಜಂಗಮನ ಹೆಜ್ಜೆ
ತುಳಿಸಿಕೊಂಡರೂ
ಪಾದಕ್ಕೆ ನೋವಾಯಿತೇ
ಎನ್ನುತ್ತಾಳೆ ಅವ್ವ

-೨-
ದಡದಲ್ಲಿ ನಿಂತು
ಮಾತಾಡಿದೆ
ಕನಸುಗಳ ಕಳುಹಿಸಿದೆ
ಆಕೆ
ದೂರದಿಂದಲೇ
ಹೂವಾದಳು

-೩-
ನಿನ್ನ ಶಬ್ದಕ್ಕೆ
ಬದುಕು ಕಟ್ಟುವ ಕಸುವು
ಇದೆ ಎಂದು ತಿಳಿದಾಗ
ನಿಶಬ್ದದ ತಂಗಾಳಿ
ತಾಗಿ ಹೋಯಿತು

-೪-
ನೀನು ಮರೆಯಾದ
ಮೇಲೆ
ಕತ್ತಲು ಬೆಳಕಿನ
ವ್ಯಾಖ್ಯಾನಕೆ
ತಡವರಿಸಿದೆ

-೫-
ಸುತ್ತಾಡಿದ ಕುಳಿತ ನೆಲ
ಮತ್ತೆ ಕಾಡುತಿವೆ
ಅಲ್ಲೇ ಅದೇ ಜಾಗದಲ್ಲಿ
ಮತ್ತೆ ಕನಸುಗಳು
ಜೀವತಾಳುತ್ತಿವೆ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಪ್ನ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೩೩

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಗದ್ದೆ

    ಅದೊಂದು ಬೆಟ್ಟದ ಊರು. ಪುಟ್ಟ ಪುಟ್ಟ ಗುಡ್ಡಕ್ಕೆ ತಾಗಿಕೊಂಡು ಸಂದಿಯಲ್ಲಿ ಗೊಂದಿಯಲ್ಲಿ ಎದ್ದ ಗುಡಿಸಲುಗಳು ಅರ್ಥಾತ್ ಈ ಜೀವನ ಕಳೆಯೋ ಬಗೆಯಲಿ ಕಟ್ಟಿಕೊಂಡ ಪುಟ್ಟ ಮನೆಗಳು ಹೊತ್ತು… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಆವರ್ತನೆ

    ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು.… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…