ನಿಶಬ್ದದ ತಂಗಾಳಿ ತಾಗಿ ಹೋಯಿತು

-೧-
ಭೂಮಿ ಮೇಲೆ
ಜಂಗಮನ ಹೆಜ್ಜೆ
ತುಳಿಸಿಕೊಂಡರೂ
ಪಾದಕ್ಕೆ ನೋವಾಯಿತೇ
ಎನ್ನುತ್ತಾಳೆ ಅವ್ವ

-೨-
ದಡದಲ್ಲಿ ನಿಂತು
ಮಾತಾಡಿದೆ
ಕನಸುಗಳ ಕಳುಹಿಸಿದೆ
ಆಕೆ
ದೂರದಿಂದಲೇ
ಹೂವಾದಳು

-೩-
ನಿನ್ನ ಶಬ್ದಕ್ಕೆ
ಬದುಕು ಕಟ್ಟುವ ಕಸುವು
ಇದೆ ಎಂದು ತಿಳಿದಾಗ
ನಿಶಬ್ದದ ತಂಗಾಳಿ
ತಾಗಿ ಹೋಯಿತು

-೪-
ನೀನು ಮರೆಯಾದ
ಮೇಲೆ
ಕತ್ತಲು ಬೆಳಕಿನ
ವ್ಯಾಖ್ಯಾನಕೆ
ತಡವರಿಸಿದೆ

-೫-
ಸುತ್ತಾಡಿದ ಕುಳಿತ ನೆಲ
ಮತ್ತೆ ಕಾಡುತಿವೆ
ಅಲ್ಲೇ ಅದೇ ಜಾಗದಲ್ಲಿ
ಮತ್ತೆ ಕನಸುಗಳು
ಜೀವತಾಳುತ್ತಿವೆ….
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಪ್ನ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೩೩

ಸಣ್ಣ ಕತೆ

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಗುಲ್ಬಾಯಿ

    ನಮ್ಮ ಪರಮಮಿತ್ರರಾದ ಗುಂಡೇರಾವ ಇವರ ನೇತ್ರರೋಗದ ಚಿಕಿತ್ಸೆ ಗಾಗಿ ನಾವು ಮೂವರು ಮಿರ್ಜಿಯಲ್ಲಿರುವ ಡಾಕ್ಟರ ವಾಲ್ನೆಸ್ ಇವರ ಔಷಧಾಲಯಕ್ಕೆ ಬಂದಿದ್ದೆವು. ಗುಂಡೇರಾಯರು ಹಗಲಿರುಳು ಔಷಧಾಲಯದಲ್ಲಿಯೇ ಇರಬೇಕಾಗಿರುವದರಿಂದ ಆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…