ನಿಶಬ್ದದ ತಂಗಾಳಿ ತಾಗಿ ಹೋಯಿತು

-೧-
ಭೂಮಿ ಮೇಲೆ
ಜಂಗಮನ ಹೆಜ್ಜೆ
ತುಳಿಸಿಕೊಂಡರೂ
ಪಾದಕ್ಕೆ ನೋವಾಯಿತೇ
ಎನ್ನುತ್ತಾಳೆ ಅವ್ವ

-೨-
ದಡದಲ್ಲಿ ನಿಂತು
ಮಾತಾಡಿದೆ
ಕನಸುಗಳ ಕಳುಹಿಸಿದೆ
ಆಕೆ
ದೂರದಿಂದಲೇ
ಹೂವಾದಳು

-೩-
ನಿನ್ನ ಶಬ್ದಕ್ಕೆ
ಬದುಕು ಕಟ್ಟುವ ಕಸುವು
ಇದೆ ಎಂದು ತಿಳಿದಾಗ
ನಿಶಬ್ದದ ತಂಗಾಳಿ
ತಾಗಿ ಹೋಯಿತು

-೪-
ನೀನು ಮರೆಯಾದ
ಮೇಲೆ
ಕತ್ತಲು ಬೆಳಕಿನ
ವ್ಯಾಖ್ಯಾನಕೆ
ತಡವರಿಸಿದೆ

-೫-
ಸುತ್ತಾಡಿದ ಕುಳಿತ ನೆಲ
ಮತ್ತೆ ಕಾಡುತಿವೆ
ಅಲ್ಲೇ ಅದೇ ಜಾಗದಲ್ಲಿ
ಮತ್ತೆ ಕನಸುಗಳು
ಜೀವತಾಳುತ್ತಿವೆ….
*****

Leave a Reply to Anonymous Cancel reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಪ್ನ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೩೩

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಎರಡು ಮದುವೆಗಳು

    ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕರೀಮನ ಪಿಟೀಲು

    ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ… Read more…

cheap jordans|wholesale air max|wholesale jordans|wholesale jewelry|wholesale jerseys