Home / ಲೇಖನ / ವಿಜ್ಞಾನ / ರಾಷ್ಟ್ರ ಪಕ್ಷಿ: ನವಿಲು

ರಾಷ್ಟ್ರ ಪಕ್ಷಿ: ನವಿಲು

ನವಿಲು ನಮ್ಮ ರಾಷ್ಟ್ರಪಕ್ಷಿ. ನವಿಲು ತನ್ನ ಸೌಂದರ್‍ಯ, ಬಣ್ಣ ಹಾಗೂ ನಡೆಗಳಿಗೆ ಪ್ರಸಿದ್ಧಿಯಾಗಿದೆ. ಇದು ವಿಶ್ವದಲ್ಲೇ ಅತ್ಯಂತ ಸುಂದರವಾದ ಪಕ್ಷಿ.

ಹೆಣ್ಣು ನವಿಲಿಗಿಂತ ಗಂಡು ನವಿಲು ಹೆಚ್ಚು ಸುಂದರ. ಹಾಲು ಬಣ್ಣದ ಹೊಳಪಿನ ಮುಖ, ನೀಲಿಬಣ್ಣದ ತಲೆ, ಅದರ ಮೇಲೆ ರಾಜಠೀವಿ ಮೆರೆಸುವ ತುರಾಯಿ, ಕೆಂಪುಮಿಶ್ರಿತ ನಸುಹಳದಿ ಬಣ್ಣದ ರೆಕ್ಕೆ, ಬೆನ್ನಮೇಲಿನ ಹಸಿರು, ನೀಲಿ ಬಣ್ಣದ ಉದ್ದದ ಗರಿಗಳು, ಆ ಗರಿಗಳ ಮೇಲೆ ಕಣ್ಣಿನ ಹಾಗೆ ಕಾಣುವ ದುಂಡಾಕಾರದ ಚುಕ್ಕೆಗಳು.

ಹೆಣ್ಣು ನವಿಲು ಗಂಡು ನವಿಲಿಗಿಂತ ಚಿಕ್ಕದಾಗಿರುತ್ತದೆ. ಬಣ್ಣವೂ ಕೂಡ ಮಸುಕಾಗಿರುತ್ತದೆ. ಗಂಡು ನವಿಲು ಒಂದೂವರೆ ಮೀಟರ್‍ ಉದ್ದವಾಗಿದ್ದರೆ, ಹೆಣ್ಣು ನವಿಲಿನ ಉದ್ದ ಒಂದು ಮೀಟರ್‌ಗಿಂತ ಕಡಿಮೆ ಹಾಗೂ ಗಂಡು ನವಿಲು ೫ ಕೆ.ಜಿ. ಭಾರವಿದ್ದರೆ ಹೆಣ್ಣು ನವಿಲಿನ ಭಾರ ೫ ಕೆ.ಜಿ.ಗಿಂತ ಕಡಿಮೆ. ಸಾಮಾನ್ಯವಾಗಿ ನವಿಲುಗಳು ೨೦ ವರ್‍ಷಗಳವರೆಗೆ ಬದುಕುತ್ತವೆ.

ಹೆಣ್ಣು ನವಿಲು ಮೊಟ್ಟೆಯಿಡುವ ಕಾಲ ಫೆಬ್ರುವರಿಯಿಂದ ಆಗಸ್ಟ್‌ ತಿಂಗಳವರೆಗೆ. ಈ ಕಾಲದಲ್ಲಿ ಹೆಣ್ಣು ನವಿಲು ನೆಲದಲ್ಲಿ ಗೂಡು ಕಟ್ಟಿ ೧೦ ಬಿಳಿಯ ಮೊಟ್ಟೆಗಳನ್ನಿಡುತ್ತದೆ. ಅದು ೮ ತಿಂಗಳವರೆಗೆ ತನ್ನ ಮರಿಗಳನನ್ನು ಪೋಷಿಸುತ್ತದೆ. ನವಿಲುಮರಿಗೆ ತನ್ನ ಮೂರನೆಯ ವರ್‍ಷದಲ್ಲಿ ಗರಿ ಬೆಳೆಯಲಾರಂಭಿಸುತ್ತದೆ.

ಥೈಲೆಂಡ್, ಜಾವಾ, ಬರ್‍ಮಾ ಮತ್ತು ಮಲಯ ದೇಶಗಳಲ್ಲಿರುವ ನವಿಲುಗಳು ನಮ್ಮ ದೇಶದ ನವಿಲಿಗಿಂತ ಭಿನ್ನ. ಅವುಗಳ ಬಣ್ಣ ಹಸಿರು, ಉದ್ದವಾದ ಕಾಲುಗಳು ಅವುಗಳಿಗಿರುತ್ತವೆ.

ಮಳೆಗಾಲದ ಮೋಡಗಳನ್ನು ನೋಡಿ ನವಿಲಿಗೆ ಬಹಳ ಸಂತೋಷವಾಗುತ್ತದೆ. ಆಗ ಅದು (ಗಂಡು ನವಿಲು) ಹೆಣ್ಣು ನವಿಲಿನ ಮುಂದೆ ಕುಣಿಯಲು ಅನುವಾಗುತ್ತದೆ. ತನ್ನ ಬಣ್ಣ ಬಣ್ಣದ ಗರಿಗಳನ್ನು ಬಿಲ್ಲಿನಾಕಾರದಲ್ಲಿ ಕೆದರಿಕೊಂಡು ತನ್ನ ಸೌಂದರ್‍ಯವನ್ನು ಪ್ರದರ್‍ಶಿಸುತ್ತದೆ. ಗರಿಗಳನ್ನು ಪಟಪಟನೆ ಬಡಿದು ಅವುಗಳನ್ನು ಇನ್ನಷ್ಟು ಹರವಿ ಹೆಣ್ಣು ನವಿಲಿನಮನಸ್ಸನ್ನು ತನ್ನತ್ತ ಸೆಳೆಯಲು ಪ್ರಯತ್ನಿಸುತ್ತದೆ. ಈ ಮಯೂರ ನೃತ್ಯ ಮಧ್ಯ ಜನವರಿಯಿಂದ ಡಿಸೆಂಬರ್‌ವರೆಗೆ ನಡೆಯುತ್ತದೆ. ನವಿಲಿನ ಈ ನೃತ್ಯ ೧೫ ರಿಂದ ೩೫ ನಿಮಿಷಗಳವರೆಗೂ ಸಾಗಬಹುದು.

ನವಿಲು ತನ್ನ ಶತ್ರುಗಳ ನಡುವೆ ಸಿಕ್ಕಿಹಾಕಿಕೊಂಡಾಗಲೂ ಕ್ರೋಧದಿಂದ ಕುಣಿದು ವೈರಿಯನ್ನು ತಲ್ಲಣಗೊಳಿಸಲು ಪ್ರಯತ್ನಿಸುತ್ತದೆ ಮತ್ತು ಸಮಯ ಸಾಧಿಸಿ ಅಪಾಯದಿಂದ ಪಾರಾಗುತ್ತದೆ. ಅದೂ ಅಲ್ಲದೆ ನವಿಲು ತನ್ನ ಮಕ್ಕಳ ಹಾಗೂ ತನ್ನ ಗೂಡಿನ ಗಡಿಯ ರಕ್ಷಣೆಗಾಗಿ ಸಮಯ ಬಂದಾಗ ಗರಿಹರವಿ ನರ್‍ತಿಸುತ್ತದೆ.

ನವಿಲುಗಳು ಅಡವಿಯಲ್ಲಿ ಗುಂಪು-ಗುಂಪಾಗಿ ವಾಸಿಸುತ್ತವೆ. ಅವು ರಾತ್ರಿಗಳನ್ನು ಮರಗಳ ಮೇಲೆ ಕಳೆಯುತ್ತವೆ.

ಕ್ರಿಮಿ ಕೀಟಗಳು, ಬೀಜ ಧಾನ್ಯಗಳು, ಹಾವು, ಉರಗಗಳು, ಹಲ್ಲಿಗಳು, ಮಿಡತೆಗಳು ಮತ್ತು ಕಂಬಳಿಹುಳಗಳು ನಿವಿಲಿನ ಆಹಾರಗಳಾಗಿವೆ.

ನವಿಲು ಬಹಳ ಉಪಯುಕ್ತ ಪ್ರಾಣಿ. ಅದರ ರೆಕ್ಕೆಗಳಿಂದ ನಿರ್‍ಮಿತವಾದ ಬೀಸಣಿಗೆಗಳು ಅತ್ಯಂತ ಆಕರ್‍ಷಕ. ನವಿಲು ಬೆಳೆಗಳನ್ನು ನಾಶ ಮಾಡುವ ಕ್ರಿಮಿಕೀಟಗಳನ್ನು ತಿಂದು ಬೆಳೆಗಳ ರಕ್ಷಣೆ ಮಾಡುತ್ತದೆ.

ನವಿಲು ಮಾಂಸವನ್ನು ಕೆಲ ಜನರು ತಿನ್ನುತ್ತಾರೆ; ಅಲ್ಲದೆ ಅದು ಔಷಧಕ್ಕೂ ಉಪಯುಕ್ತ. ಈ ಎಲ್ಲ ಉಪಯುಕ್ತತೆಯಿಂದಾಗಿ ಕೆಲವರು ನವಿಲುಗಳ ಕಳ್ಳ ಬೇಟೆಯಲ್ಲಿ ತೊಡಗಿದ್ದಾರೆ. ಆದ್ದರಿಂದಾಗಿ ನವಿಲುಗಳ ಸಂತತಿ ನಶಿಸಿ ಹೋಗುವ ಹಂತದಲ್ಲಿದೆ. ಗುಂಪು-ಗುಂಪಾಗಿದ್ದ ಸ್ಥಳಗಲ್ಲಿ ಈಗ ಒಂದೋ-ಎರಡೋ ನವಿಲುಗಳು ಕಾಣಿಸುತ್ತಿವೆ. ಪರಿಣಾಮವಾಗಿ ನಮ್ಮ ನಿಸರ್‍ಗದ ಚೆಲುವಿಗೆ ಭಂಗ ಬರಗೊಡಗಿದೆ. ಹುಳುಹುಪ್ಪಟೆಗಳ ನಿರ್‍ಮೂಲನೆಯಲ್ಲಿ ನಮ್ಮ ರೈತರಿಗಾಗುತ್ತಿದ್ದ ಸಹಾಯಕ್ಕೆ ಈಗ ಸಂಚಕಾರ ಒದಗುತ್ತಿದೆ. ಇದನ್ನೆಲ್ಲ ಗಮನಿಸಿಯೇ ಸರ್‍ಕಾರ ಅವುಗಳ ಬೇಟೆಯನ್ನು ಅಪರಾಧವೆಂದು ಸಾರಿದೆ. ರಾಷ್ಟ್ರೀಯ ಪಕ್ಷಿ ನವಿಲನ್ನು ರಕ್ಷಿಸುವುದು ನಮ್ಮೆಲ್ಲರ ಕರ್‍ತವ್ಯವಲ್ಲವೇ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...