ಮೌನ ವೇದನೆ

ರಸ್ತೆಯ ಇಕ್ಕೆಲಗಳಲ್ಲಿ ಗುಡಿಸಿಟ್ಟ ಪ್ಲಾಸ್ಟಿಕ್ ಚೀಲಗಳು, ಒಣಗಿದ ಎಲೆಗಳು, ಎಸೆದ ನಾನಾ ರೀತಿಯ ಕಸ ದುರ್ವಾಸನೆ ಬೀರುತ್ತಿತ್ತು. ಏನಾದರು ಆಹಾರ ಸಿಕ್ಕಿತೇ ಎಂದು, ನಾಯಿ ಮೂಸಿ ನೋಡಿ ಮುಂದೆ ಹೋಯಿತು. ಅದರ ಹಿಂದೆಯೇ ಹಂದಿ ಬಂದು ಮೂಸಿನೋಡಿ ಮುಂದೆ ಹೋಯಿತು. ಕೋತಿ ಕೆದಕಿ ಕೆದಕಿ ಹೋಗಿದ್ದ ಕಸದ ಪ್ಲಾಸ್ಟಿಕ್ ಚೀಲಗಳ ಜೊತೆಗೆ ಕಸ ಕಡ್ಡಿಯನ್ನು ಹಸಿದ ಹಸು ಮೇಯುತಿತ್ತು. ರೈತ ಸಾಲಕ್ಕೆ ಬಡ್ಡಿ ಕಟ್ಟಲು ಹೋಗಿದ್ದ. ಅವನಿಗೆ ಹಸುವಿನ ಚಿಂತೆ ಕಾಡಿರಲಿಲ್ಲ. ಬೆಳಿಗ್ಗೆ ಕೆಚ್ಚಲು ಗಟ್ಟಿಯಾಗಿ ಹಿಂಡಿ ಹಾಲನ್ನು ಕರೆದ. ಹಸು ಹಾಲನ್ನು ಕೊಡುವಾಗ ‘ಅಂಬಾ’ ಎನ್ನುತ್ತ ಮೂಕ ವೇದನೆ ಪಡುತಿತ್ತು. ರೈತ ಕೆಚ್ಚಲನ್ನು ಕಿವುಚುತ್ತಲೇ ಇದ್ದ. ಹಸುವಿನ ಹಾಲು ಹಾಲಿನಂತೇ ಇಲ್ಲ ಎಂದು ಜನ ಗೊಣುಗುತಿದ್ದರು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗಳಿಗೆಬಟ್ಟಲ ತಿರುವುಗಳಲ್ಲಿ – ೮೬
Next post ಭಾರ

ಸಣ್ಣ ಕತೆ

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ತೊಳೆದ ಮುತ್ತು

    ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

cheap jordans|wholesale air max|wholesale jordans|wholesale jewelry|wholesale jerseys