ಮನೆಯ ಮುಂದೆ ಬೃಹದಾಕಾರವಾಗಿ ಬೆಳದ ಮರದಿಂದ ಉದುರುವ ಒಣಗಿದ ಎಲೆ, ಕಡ್ಡಿ ಕಸ, ಹುಳು ಹುಪ್ಪಟ್ಟೆ ಸಹಿಸಲಾರದೆ ಮನೆಯ ಗಂಡು ಮಕ್ಕಳು, ತಂದೆ ಎಷ್ಟು ಬೇಡವೆಂದರು ಕೇಳದೆ ಕಡಿಸಿ ಹಾಕಿದರು. ಶಾಕೋಪ ಶಾಕೆಯಾಗಿ ಹರಡಿ ಹಸಿರು ತಂಪನ್ನು ನೀಡುತ್ತಿದ್ದ ಮರವನ್ನು ಕಡಿಸಿ ಹಾಕಿದ್ದು ವೃದ್ಧ ತಂದೆಯ ಮನಸ್ಸಿಗೆ ಅತೀವ ನೋವಾಯಿತು. ಕಡಿದ ದಿಮ್ಮಿಗೆ ಮಕ್ಕಳು ಕೆಲಸಕ್ಕೆ ಹೋದ ಮೇಲೆ ವೃದ್ಧ ದಿನವೂ ನೀರೆರೆಯುತಿದ್ದ. ದಿಮ್ಮಿಯ ಎಕ್ಕೆಲಗಳಲ್ಲಿ ಚಿಗುರೊಡೆಯಲಾರಂಭಿಸಿತು. ಇದನ್ನು ಕಂಡ ಇವರ ಗಂಡು ಮಕ್ಕಳು ಮಳೆಗಳನ್ನು ತಂದು ದಿಮ್ಮಿಯ ಮೈಗೆ ಹೊಡೆದರು. ಚಿಗುರುತಿದ್ದ ದಿಮ್ಮಿ ಪೂರ್ತಿ ಸತ್ತಿತು. ಮನೆ ಒಳಗೆ ವೃದ್ಧ ತಂದೆ ಹೃದಯಾಘಾತದಿಂದ ಪ್ರಾಣ ಬಿಟ್ಟ.
*****
Related Post
ಸಣ್ಣ ಕತೆ
-
ಗೃಹವ್ಯವಸ್ಥೆ
ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…
-
ಹುಟ್ಟು
ಶಾದಿ ಮಹಲ್ನ ಒಳ ಆವರಣದಲ್ಲಿ ದೊಡ್ಡ ಹಾಲ್ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…
-
ಕರಿ ನಾಗರಗಳು
ಚಿತ್ರ: ಆಂಬರ್ ಕ್ಲೇ ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ… Read more…
-
ಸ್ನೇಹಲತಾ
೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…
-
ಮನೆಮನೆಯ ಸಮಾಚಾರ
ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…