೮೮, ಫೆಭ್ರವರಿ ೩

ಕಾನ್ಪುರದ ಎಲ್ಲ ಬೀದಿಗಳಲ್ಲಿ
ಎಲ್ಲ ಮೆನಗಳಲ್ಲಿ
ಮನೆಯ ಮಾಳಿಗೆಯಲ್ಲಿ ಮೂರು
ಹೆಣಗಳು ತೂಗಿದವು ನಿಶ್ಚಿಂತೆಯಲ್ಲಿ.

ಗುಲಾಬಿಯಷ್ಟೇ ಮೃದು ಮನಸಿನ
ಜೀವಿಗಳು ಸಾವಿನಲ್ಲೂ
ನೋವಿನ ಮುಖವನ್ನೇ ಹೊತ್ತಿದ್ದವು.
ಮದುವೆಯ ಮಾರುಕಟ್ಟೆಯಲ್ಲಿ
ಬಿಕರಿಯಾಗದ ಜೀವಗಳು
ಕುಲ, ಗೋತ್ರ, ದೇವರು, ಧರ್ಮ
ಬಂಧು ಬಳಗದ ಸಮ್ಮುಖದಲ್ಲೆ
ನೇಣಿಗೇರಿದ್ದವು.

ಜಗತ್ತಿನ ತಂದೆ ತಾಯಿಯರು
ಅಚ್ಚರಿಯಿಂದ, ಭಯದಿಂದ
ನೋಡಿದರು. ತಂತಮ್ಮ
ಮಕ್ಕಳ ಮುಖವೆ
ಕಂಡಂತಾಗಿ ಹೌಹಾರಿದರು.

ಕೆಲವು ಎದೆಗಳು ಭಾರವಾದವು
ಹಲವು ಕಣ್ಣುಗಳು ನೀರಾದವು
ಒಂದಷ್ಟು ತುಟಿಗಳು
ಲೊಚಗುಟ್ಟಿ ಸುಮ್ಮನಾದವು.

ಆದಿನ ಕಾನ್ಪುರದ
ಎಲ್ಲ ಬೀದಿಗಳಲ್ಲಿ
ಎಲ್ಲ ಮನೆಗಳಲ್ಲಿ
ಹೆಣಗಳದ್ದೆ ವಾಸನೆ
ಎಲ್ಲ ನಿರುಮ್ಮಳ
ಅದನ್ನೆ ಉಸಿರಾಡಿದರು.

(ಹೆತ್ತವರು ವರದಕ್ಷಿಣೆ ತೆರುವುದನ್ನು ತಪ್ಪಿಸಲು ನೇಣು ಹಾಕಿಕೊಂಡ ಕಾನ್ಪುರದ ಮಮತಾ, ಪೂನಂ, ಅಲಕಾ ಸಹೋದರಿಯರು ಬರೆಸಿದ ಕವನ)
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಿಡಿ
Next post ಏಕತೆ

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

cheap jordans|wholesale air max|wholesale jordans|wholesale jewelry|wholesale jerseys