Home / ಕವನ / ಕವಿತೆ / ಧಿಕ್ಕರಿಸುತ್ತೇನೆ

ಧಿಕ್ಕರಿಸುತ್ತೇನೆ

ನಿನ್ನ ಸಿಟ್ಟು ಸೆಡವುಗಳನ್ನು
ದಿಕ್ಕರಿಸುತ್ತೇನೆ.

ನಿನ್ನ ಪಂಜಿನಂತಹ ಕೈಗಳು
ಸುಕೋಮಲ ಹೂಗಳನ್ನು
ಹೊಸಕಿ ಹಾಕುವುದನ್ನೂ
ನಿನ್ನ ಕೆಂಡದಂತಹ ಕಣ್ಣುಗಳು
ಕೋಗಿಲೆಯ ಹಾಡುಗಳನ್ನು
ನಿಷ್ಕರುಣೆಯಿಂದ ಸುಡುವುದನ್ನೂ
ಧಿಕ್ಕರಿಸುತ್ತೇನೆ.

ನೀನು ಮೈಯೆಲ್ಲಾ
ಕಿಡಿಯಾಗಿರುವ ತನಕ
ಈ ಚೈತನ್ಯಮಯವಾದ
ಕಾಡನ್ನು ಪ್ರವೇಶಿಸಲು ನಿಷೇಧವಿದೆ.

ನಿನ್ನ ಕ್ರೌರ್ಯ, ಆಕ್ರೋಶಗಳನ್ನು
ಧಿಕ್ಕರಿಸುತ್ತೇನೆ.

ನಿನ್ನ ಸಾವಿರ ಸಾವಿರ
ನದಿಗಳಲ್ಲಿ ಬಂದೂಕಿನ
ಅಲೆಗಳು ತೇಲುವುದನ್ನೂ
ಪುಟಿಯುವ ಮೀನುಗಳ ಬದಲು
ಗುಂಡುಗಳು ಹಾರಾಡುವುದನ್ನೂ
ಓಕುಳಿಯ ಬದಲು
ನೆತ್ತರು ಹರಿಯುವುದನ್ನೂ
ಧಿಕ್ಕರಿಸುತ್ತೇನೆ.

ನೀನು ಮೈಯೆಲ್ಲಾ
ಬಂದೂಕಾಗಿರುವ ತನಕ
ಈ ಪ್ರೇಮಮಯ
ಸಮುದ್ರವನ್ನು ಪ್ರವೇಶಿಸಲು
ನಿಷೇಧವಿದೆ

ನಿನ್ನನ್ನು ಒಪ್ಪಿಕೊಳ್ಳುವುದೆಂದರೆ
ಈ ನೆಲದ ಒಡಲಿಂದ
ಕೇವಲ ಜ್ವಾಲಾಮುಖಿಗಳನ್ನೇ
ಅಗೆಯಬೇಕು.
ತಂಪಾದ ಕಾಡುಗಳನ್ನೂ
ತಣ್ಣನೆಯ ನದಿಗಳನ್ನೂ
ನಿರಾಕರಿಸಬೇಕು.

ನಿನ್ನನ್ನು ಒಪ್ಪಿಕೊಳ್ಳಬೇಕೆಂದರೆ
ಆ ಆಕಾಶದ ಒಡಲಲ್ಲಿ
ಕೇವಲ ಸುಡುವ
ಸೂರ್ಯರನ್ನೆ ಎಣಿಸಬೇಕು
ತಣ್ಣನೆಯ ಮೋಡಗಳನ್ನೂ
ತಂಪಾದ ಚಂದ್ರರನ್ನೂ
ನಿರಾಕರಿಸಬೇಕು.

ಜ್ವಾಲಾಮುಖಿಯೇ ಆಗಲಿ
ಸೂರ್ಯನೇ ಆಗಲಿ
ಸಿಟ್ಟಿನಿಂದ, ಆಕ್ರೋಶದಿಂದ
ಯಾರನ್ನೂ ಸುಟ್ಟ ದಾಖಲೆಗಳಿಲ್ಲ.

ನೀನು ಭೂಮಿಯ-ಆಕಾಶದ
ನಿಯಮಗಳನ್ನು ಮೀರಲಾರೆ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...