Home / ಕವನ / ಕವಿತೆ / ಧಿಕ್ಕರಿಸುತ್ತೇನೆ

ಧಿಕ್ಕರಿಸುತ್ತೇನೆ

ನಿನ್ನ ಸಿಟ್ಟು ಸೆಡವುಗಳನ್ನು
ದಿಕ್ಕರಿಸುತ್ತೇನೆ.

ನಿನ್ನ ಪಂಜಿನಂತಹ ಕೈಗಳು
ಸುಕೋಮಲ ಹೂಗಳನ್ನು
ಹೊಸಕಿ ಹಾಕುವುದನ್ನೂ
ನಿನ್ನ ಕೆಂಡದಂತಹ ಕಣ್ಣುಗಳು
ಕೋಗಿಲೆಯ ಹಾಡುಗಳನ್ನು
ನಿಷ್ಕರುಣೆಯಿಂದ ಸುಡುವುದನ್ನೂ
ಧಿಕ್ಕರಿಸುತ್ತೇನೆ.

ನೀನು ಮೈಯೆಲ್ಲಾ
ಕಿಡಿಯಾಗಿರುವ ತನಕ
ಈ ಚೈತನ್ಯಮಯವಾದ
ಕಾಡನ್ನು ಪ್ರವೇಶಿಸಲು ನಿಷೇಧವಿದೆ.

ನಿನ್ನ ಕ್ರೌರ್ಯ, ಆಕ್ರೋಶಗಳನ್ನು
ಧಿಕ್ಕರಿಸುತ್ತೇನೆ.

ನಿನ್ನ ಸಾವಿರ ಸಾವಿರ
ನದಿಗಳಲ್ಲಿ ಬಂದೂಕಿನ
ಅಲೆಗಳು ತೇಲುವುದನ್ನೂ
ಪುಟಿಯುವ ಮೀನುಗಳ ಬದಲು
ಗುಂಡುಗಳು ಹಾರಾಡುವುದನ್ನೂ
ಓಕುಳಿಯ ಬದಲು
ನೆತ್ತರು ಹರಿಯುವುದನ್ನೂ
ಧಿಕ್ಕರಿಸುತ್ತೇನೆ.

ನೀನು ಮೈಯೆಲ್ಲಾ
ಬಂದೂಕಾಗಿರುವ ತನಕ
ಈ ಪ್ರೇಮಮಯ
ಸಮುದ್ರವನ್ನು ಪ್ರವೇಶಿಸಲು
ನಿಷೇಧವಿದೆ

ನಿನ್ನನ್ನು ಒಪ್ಪಿಕೊಳ್ಳುವುದೆಂದರೆ
ಈ ನೆಲದ ಒಡಲಿಂದ
ಕೇವಲ ಜ್ವಾಲಾಮುಖಿಗಳನ್ನೇ
ಅಗೆಯಬೇಕು.
ತಂಪಾದ ಕಾಡುಗಳನ್ನೂ
ತಣ್ಣನೆಯ ನದಿಗಳನ್ನೂ
ನಿರಾಕರಿಸಬೇಕು.

ನಿನ್ನನ್ನು ಒಪ್ಪಿಕೊಳ್ಳಬೇಕೆಂದರೆ
ಆ ಆಕಾಶದ ಒಡಲಲ್ಲಿ
ಕೇವಲ ಸುಡುವ
ಸೂರ್ಯರನ್ನೆ ಎಣಿಸಬೇಕು
ತಣ್ಣನೆಯ ಮೋಡಗಳನ್ನೂ
ತಂಪಾದ ಚಂದ್ರರನ್ನೂ
ನಿರಾಕರಿಸಬೇಕು.

ಜ್ವಾಲಾಮುಖಿಯೇ ಆಗಲಿ
ಸೂರ್ಯನೇ ಆಗಲಿ
ಸಿಟ್ಟಿನಿಂದ, ಆಕ್ರೋಶದಿಂದ
ಯಾರನ್ನೂ ಸುಟ್ಟ ದಾಖಲೆಗಳಿಲ್ಲ.

ನೀನು ಭೂಮಿಯ-ಆಕಾಶದ
ನಿಯಮಗಳನ್ನು ಮೀರಲಾರೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...