Home / ಕವನ / ಕವಿತೆ / ವಿಮರ್ಶೆ

ವಿಮರ್ಶೆ

ನೀನು ನಿಂತ ನೆಲವನ್ನು
ನಂದನವನವೆಂದೂ
ಕೂತ ಬಂಡೆಯನ್ನು
ಐರಾವತವೆಂದೂ
ನಡೆದಾಡಿದ ಭಂಗಿ
ನಟರಾಜನದೆಂದೂ
ಒಪ್ಪಿಕೊಳ್ಳಲು
ನನ್ನಿಂದ ಆಗೊಲ್ಲ.

ನೀನು ಮೋಜಿಗಾಗಿ
ನದಿಯನ್ನು ಈಜಿದ್ದನ್ನು
ಸಮುದ್ರ ದಾಟಿದಷ್ಟು
ಸೋಜಿಗದಿಂದ ನೋಡಲು
ನನ್ನಿಂದ ಆಗೊಲ್ಲ.

ನೀನು ಮೂಸಿದ್ದು
ಮಂದಾರವೆಂದೂ
ಪೂಸಿದ್ದು ಶ್ರೀಗಂಧವೆಂದೂ
ಸಾಬೀತು ಮಾಡಲು
ನನ್ನಿಂದ ಆಗೊಲ್ಲ.

ನೀನು ಗೆರೆ ಎಳೆದದ್ದೆ
ರಂಗೋಲೆಯೆಂದು
ಸುತ್ತಿದ ಸೊನ್ನೆಯೆ
ಸೂರ್ಯನೆಂದು ಸಂಭ್ರಮಿಸಲು
ನನ್ನಿಂದ ಆಗೊಲ್ಲ.

ನಿಜ ಹೇಳಬೇಕೆಂದರೆ
ನನಗೆ ಬೆಳಕಿನ ಬಗ್ಗೆ
ವ್ಯಾಮೋಹವಾಗಲಿ
ಕತ್ತಲೆಯ ಬಗ್ಗೆ ಕನಿಕರವಾಗಲಿ ಇಲ್ಲ.

ನನ್ನ ತೋಟದಲ್ಲಿ
ನೂರಾರು ಬಣ್ಣದ ಹೂಗಳಿವೆ.
ಮಾವಿನ ಮರದ
ಜೊತೆ ಜೊತೆಗೆ
ಬೇವಿನ ಮರಗಳೂ ಇವೆ.
ಹಾಗಲ ಹಾಗೂ ಸಿಹಿಗುಂಬಳ
ಒಂದೇ ಚಪ್ಪರವನ್ನು
ತಬ್ಬಿ ನಿಂತಿವೆ.

ಕೆಲವರನ್ನು ಬೆಟ್ಟ ಹತ್ತಿಸಿದ್ದರೆ
ಅನುರಾಗದಿಂದಲ್ಲ
ಹಲವರನ್ನು ಕಂದಕಕ್ಕೆ
ನೂಕಿದ್ದರೆ ಆಕಸ್ಮಿಕವೂ ಅಲ್ಲ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...