ವಿಮರ್ಶೆ

ನೀನು ನಿಂತ ನೆಲವನ್ನು
ನಂದನವನವೆಂದೂ
ಕೂತ ಬಂಡೆಯನ್ನು
ಐರಾವತವೆಂದೂ
ನಡೆದಾಡಿದ ಭಂಗಿ
ನಟರಾಜನದೆಂದೂ
ಒಪ್ಪಿಕೊಳ್ಳಲು
ನನ್ನಿಂದ ಆಗೊಲ್ಲ.

ನೀನು ಮೋಜಿಗಾಗಿ
ನದಿಯನ್ನು ಈಜಿದ್ದನ್ನು
ಸಮುದ್ರ ದಾಟಿದಷ್ಟು
ಸೋಜಿಗದಿಂದ ನೋಡಲು
ನನ್ನಿಂದ ಆಗೊಲ್ಲ.

ನೀನು ಮೂಸಿದ್ದು
ಮಂದಾರವೆಂದೂ
ಪೂಸಿದ್ದು ಶ್ರೀಗಂಧವೆಂದೂ
ಸಾಬೀತು ಮಾಡಲು
ನನ್ನಿಂದ ಆಗೊಲ್ಲ.

ನೀನು ಗೆರೆ ಎಳೆದದ್ದೆ
ರಂಗೋಲೆಯೆಂದು
ಸುತ್ತಿದ ಸೊನ್ನೆಯೆ
ಸೂರ್ಯನೆಂದು ಸಂಭ್ರಮಿಸಲು
ನನ್ನಿಂದ ಆಗೊಲ್ಲ.

ನಿಜ ಹೇಳಬೇಕೆಂದರೆ
ನನಗೆ ಬೆಳಕಿನ ಬಗ್ಗೆ
ವ್ಯಾಮೋಹವಾಗಲಿ
ಕತ್ತಲೆಯ ಬಗ್ಗೆ ಕನಿಕರವಾಗಲಿ ಇಲ್ಲ.

ನನ್ನ ತೋಟದಲ್ಲಿ
ನೂರಾರು ಬಣ್ಣದ ಹೂಗಳಿವೆ.
ಮಾವಿನ ಮರದ
ಜೊತೆ ಜೊತೆಗೆ
ಬೇವಿನ ಮರಗಳೂ ಇವೆ.
ಹಾಗಲ ಹಾಗೂ ಸಿಹಿಗುಂಬಳ
ಒಂದೇ ಚಪ್ಪರವನ್ನು
ತಬ್ಬಿ ನಿಂತಿವೆ.

ಕೆಲವರನ್ನು ಬೆಟ್ಟ ಹತ್ತಿಸಿದ್ದರೆ
ಅನುರಾಗದಿಂದಲ್ಲ
ಹಲವರನ್ನು ಕಂದಕಕ್ಕೆ
ನೂಕಿದ್ದರೆ ಆಕಸ್ಮಿಕವೂ ಅಲ್ಲ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೊಳಲು
Next post ಸುಖಾಂತ

ಸಣ್ಣ ಕತೆ

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys