Home / ಕವನ / ಕವಿತೆ / ನೀನೆಂಬುದಿಲ್ಲದಿದ್ದರೆ…. ನಾನೆಂಬುದೂ ಇಲ್ಲ

ನೀನೆಂಬುದಿಲ್ಲದಿದ್ದರೆ…. ನಾನೆಂಬುದೂ ಇಲ್ಲ

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಗಿಡ ಮರ ಹೂಗಳಿಲ್ಲ.
ಹಕ್ಕಿ ಹಾಡು, ಗೂಡುಗಳಿಲ್ಲ.
ಕತ್ತಲ ತೊಡೆಯುವ ಸೂರ್‍ಯ
ಕಲ್ಮಶಗಳನ್ನು ತೊಳೆಯುವ ನದಿ
ಜಗತ್ತೆ ಅತ್ತಂತೆ ಕಾಣಿಸಿಸುವ ಮಳೆ
ಜಗತ್ತೆ ನಕ್ಕಂತೆ ಕಾಣಿಸುವ
ಬೆಳದಿಂಗಳು, ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಮೆಟ್ಟಿದರೂ ಮಿಡುಕದ ನೆಲ
ಮಿಂಚಿ ಮಳೆಗರೆವ ಮುಗಿಲು
ತಗ್ಗದ, ಬಗ್ಗದ, ಜಗ್ಗದ
ಬೆಟ್ಟಗಳ ಸಾಲು
ಝೇಂಕರಿಸುವ ದುಂಬಿ
ನಿಟ್ಟುಸಿರಿಡುವ ಗಾಳಿ
ಹರ್‍ಷ ತುಂಬಿದ ಹಗಲು
ವಿಷಾದ ಸೂಸುವ ಇರುಳು
ಯಾವುವೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಪಂಜಗಳಿದ್ದೂ ಪಂಜರದೊಳಗೆ
ಬಂದಿಯಾದ ಸಿಂಹ
ನರ್‍ತನವೆಂದರೇನು ಎಂದು
ಕೇಳುವ ನವಿಲು
ಕಾಡಿನ ಜಾಡರಿಯದ ಜಿಂಕೆ
ಹಾರಲು ಹಿಂಜರಿಯುವ ಹಕ್ಕಿ
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಚಿಂದಿ ಆಯುವ ಹುಡುಗ
ಹೂಮಾರುವ ಹುಡುಗಿ
ಕಳ್ಳ, ಕದೀಮ, ಕಲಾವಿದ,
ಠೇಂಕರಿಸುವ ರಾಜಕಾರಣಿ
ಹೂಂಕರಿಸುವ ಉಗ್ರಗಾಮಿ
ಯಾರ್‍ಯಾರೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ನೇಣಿಗೇರಿದ ನಿರುದ್ಯೋಗಿ
ಪ್ರೀತಿಸಿ ಕೈಕೊಟ್ಟ ಪ್ರೇಮಿ
ಹೆತ್ತು ಬಿಸಾಡಿಹೋದ ತಾಯಿ
ವರದಕ್ಷಿಣೆ, ಸೀಮೆಎಣ್ಣೆ,
ಕೋರ್‍ಟು, ಕಛೇರಿ,
ಜಾಮೀನೂ ಜೈಲು
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ನೀರಿಲ್ಲದ ನಲ್ಲಿ
ಕೈಕೊಡುವ ಕರೆಂಟು
ವೋಟು, ಬಜೆಟು,
ಸ್ಲಮ್ಮು, ಸ್ಲೋಗನ್ನು
ಸಾರಾಯಿ, ತುರಾಯಿ
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಮಸೀದಿ, ಮಠ, ಮುಷ್ಕರ
ಮೆರವಣಿಗೆಗಳಿಲ್ಲ.
ಭಾಷಣ, ಭರವಸೆ
ಪ್ರಣಾಳಿಕೆಗಳಿಲ್ಲ.
ಗಡಿ, ಗನ್ನು,
ಅಪಘಾತ, ಅಣುಬಾಂಬು
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ದುಃಖ, ದುಗುಡ, ದುಮ್ಮಾನವಿಲ್ಲ.
ಆಸೆ, ಅಕ್ಕರೆ, ಅಹಂಕಾರಗಳಿಲ್ಲ.
ಆತ್ಮನೂ ಇಲ್ಲ, ಪರಮಾತ್ಮನೂ ಇಲ್ಲ.
ಧ್ಯಾನ, ಮೋಕ್ಷ, ಮರಣ,
ಸಮಾಧಿ, ಸ್ಮಾರಕಗಳಿಲ್ಲ.
ಅಣುವೂ ಇಲ್ಲ
ಬ್ರಹ್ಮಾಂಡವೂ ಇಲ್ಲ.

ಇಲ್ಲಿ….
ನಾನು-ನೀನು
ಏನೇನೂ ಅಲ್ಲ.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...