Home / ಕವನ / ಕವಿತೆ / ನೀನೆಂಬುದಿಲ್ಲದಿದ್ದರೆ…. ನಾನೆಂಬುದೂ ಇಲ್ಲ

ನೀನೆಂಬುದಿಲ್ಲದಿದ್ದರೆ…. ನಾನೆಂಬುದೂ ಇಲ್ಲ

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಗಿಡ ಮರ ಹೂಗಳಿಲ್ಲ.
ಹಕ್ಕಿ ಹಾಡು, ಗೂಡುಗಳಿಲ್ಲ.
ಕತ್ತಲ ತೊಡೆಯುವ ಸೂರ್‍ಯ
ಕಲ್ಮಶಗಳನ್ನು ತೊಳೆಯುವ ನದಿ
ಜಗತ್ತೆ ಅತ್ತಂತೆ ಕಾಣಿಸಿಸುವ ಮಳೆ
ಜಗತ್ತೆ ನಕ್ಕಂತೆ ಕಾಣಿಸುವ
ಬೆಳದಿಂಗಳು, ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಮೆಟ್ಟಿದರೂ ಮಿಡುಕದ ನೆಲ
ಮಿಂಚಿ ಮಳೆಗರೆವ ಮುಗಿಲು
ತಗ್ಗದ, ಬಗ್ಗದ, ಜಗ್ಗದ
ಬೆಟ್ಟಗಳ ಸಾಲು
ಝೇಂಕರಿಸುವ ದುಂಬಿ
ನಿಟ್ಟುಸಿರಿಡುವ ಗಾಳಿ
ಹರ್‍ಷ ತುಂಬಿದ ಹಗಲು
ವಿಷಾದ ಸೂಸುವ ಇರುಳು
ಯಾವುವೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಪಂಜಗಳಿದ್ದೂ ಪಂಜರದೊಳಗೆ
ಬಂದಿಯಾದ ಸಿಂಹ
ನರ್‍ತನವೆಂದರೇನು ಎಂದು
ಕೇಳುವ ನವಿಲು
ಕಾಡಿನ ಜಾಡರಿಯದ ಜಿಂಕೆ
ಹಾರಲು ಹಿಂಜರಿಯುವ ಹಕ್ಕಿ
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಚಿಂದಿ ಆಯುವ ಹುಡುಗ
ಹೂಮಾರುವ ಹುಡುಗಿ
ಕಳ್ಳ, ಕದೀಮ, ಕಲಾವಿದ,
ಠೇಂಕರಿಸುವ ರಾಜಕಾರಣಿ
ಹೂಂಕರಿಸುವ ಉಗ್ರಗಾಮಿ
ಯಾರ್‍ಯಾರೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ನೇಣಿಗೇರಿದ ನಿರುದ್ಯೋಗಿ
ಪ್ರೀತಿಸಿ ಕೈಕೊಟ್ಟ ಪ್ರೇಮಿ
ಹೆತ್ತು ಬಿಸಾಡಿಹೋದ ತಾಯಿ
ವರದಕ್ಷಿಣೆ, ಸೀಮೆಎಣ್ಣೆ,
ಕೋರ್‍ಟು, ಕಛೇರಿ,
ಜಾಮೀನೂ ಜೈಲು
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ನೀರಿಲ್ಲದ ನಲ್ಲಿ
ಕೈಕೊಡುವ ಕರೆಂಟು
ವೋಟು, ಬಜೆಟು,
ಸ್ಲಮ್ಮು, ಸ್ಲೋಗನ್ನು
ಸಾರಾಯಿ, ತುರಾಯಿ
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ಮಸೀದಿ, ಮಠ, ಮುಷ್ಕರ
ಮೆರವಣಿಗೆಗಳಿಲ್ಲ.
ಭಾಷಣ, ಭರವಸೆ
ಪ್ರಣಾಳಿಕೆಗಳಿಲ್ಲ.
ಗಡಿ, ಗನ್ನು,
ಅಪಘಾತ, ಅಣುಬಾಂಬು
ಯಾವುದೂ ಇಲ್ಲ.

ನೀನೆಂಬುದಿಲ್ಲದಿದ್ದರೆ
ನಾನೆಂಬುದೂ ಇಲ್ಲ.
ದುಃಖ, ದುಗುಡ, ದುಮ್ಮಾನವಿಲ್ಲ.
ಆಸೆ, ಅಕ್ಕರೆ, ಅಹಂಕಾರಗಳಿಲ್ಲ.
ಆತ್ಮನೂ ಇಲ್ಲ, ಪರಮಾತ್ಮನೂ ಇಲ್ಲ.
ಧ್ಯಾನ, ಮೋಕ್ಷ, ಮರಣ,
ಸಮಾಧಿ, ಸ್ಮಾರಕಗಳಿಲ್ಲ.
ಅಣುವೂ ಇಲ್ಲ
ಬ್ರಹ್ಮಾಂಡವೂ ಇಲ್ಲ.

ಇಲ್ಲಿ….
ನಾನು-ನೀನು
ಏನೇನೂ ಅಲ್ಲ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...