Home / ಕವನ / ಕವಿತೆ / ಮುಗಿಯದ ಕತೆ

ಮುಗಿಯದ ಕತೆ

ಅವನು ರಾಮನು
ಗುಣ ಸಂಪನ್ನನು
ನೀತಿ ನೇಮಕ್ಕೆ
ತಲೆಬಾಗುವನು
ಗುರುಹಿರಿಯರಿಗೆ
ಪ್ರೀತಿಪಾತ್ರನು
ಯಾರನ್ನೂ ನೋಯಿಸನು.

ಅನು ರಹೀಮನು
ಅವನೂ ಗುಣ ಸಂಪನ್ನನು
ಕೊಂಚ ಸಂಕೋಚದ ಸ್ವಭಾವ
ಸದಾ ಧ್ಯಾನಸ್ಥನು
ಏಕಾಂತ ಪ್ರಿಯನು.

ಹೀಗೊಮ್ಮೆ
ರಾಮನೂ ರಹೀಮನೂ
ಭೆಟ್ಟಿಯಾದರು
ಅವನೊಳಗೆ ಅವನೊ
ಇವನೊಳಗೆ ಅವನೊ
ಎಂಬಂತೆ ಒಂದಾದರು.

ಒಂದೇ ನೋಟ
ಒಂದೇ ಮಾಟ
ಕಣ್ಣಿದ್ದವರಿಗೂ
ಕಗ್ಗಂಟಾದರು.
ಸೂರ್‍ಯಚಂದ್ರರ
ಜೋಡಿ ಕೂಡಿ
ನಲಿದಿದ್ದು ನೋಡಿ
ಜನ ತಬ್ಬಿಬ್ಬಾದರು.

ಹೀಗೆ….. ಇಬ್ಬರೂ ಕೂಡಿ
ಒಬ್ಬರೇ ಆಗಿ
ಆಟವಾಡಿದರು.

ಹಗಲು-ರಾತ್ರಿಯ ಆಟ
ಹೂವು-ಗಿಡದ ಆಟ
ಬೆಂಕಿ-ಬೆಳಕಿನ ಆಟ
ಮೋಡ-ಮಳೆಯ
ಆಟವಾಡಿದರು.

ಕೆರೆ-ದಡ, ದಡ-ಕೆರೆ,
ಎಂದು ಕುಪ್ಪಳಿಸಿದರು
ಕಣ್ಣಾಮುಚ್ಚೆ ಕಾಡೆಗೂಡೆ
ಎಂದು ಉದ್ದಿನ ಮೂಟೆ
ಉರುಳಿಸಿದರು.
ಮಾಯದ ಕೈಗಳಿಂದ
ಮರಳಿನ ಕಣಗಳಿಂದ
ಕಪ್ಪೆಗೂಡು ಕಟ್ಟಿದರು.


ರಾಮನಿಗೆ ಮೀಸೆ ಮೂಡಿ
ಮದುವೆಯಾಗಿ ಮಕ್ಕಳಾಗಿ
ಮರಣವೂ ಬಂತು.
ರಹೀಮ ಅಬ್ಬೆಪಾರಿಯಾಗಿ
ಅಲೆದು ಅಂತರ್‍ಧಾನನಾದನು.


ಇದೀಗ ಕೆರೆ ಬತ್ತಿ ದಡ ಕುಸಿದು
ಕಪ್ಪೆಗೂಡು ಹುಳುಹುಪ್ಪಟೆ
ಬಾವಲಿಗಳಿಗೆ ಬಿಡಾರವಾಯಿತು
ಹೆಬ್ಬಾಗಿಲಿನಲ್ಲಿ ಹಾವೊಂದು
ಪೊರೆಕಳಚಿ, ಪಹರೆ ನಡೆಸುತ್ತಿದ್ದ
ಮುಂಗುಸಿಗೆ ಮುಖಭಂಗವಾಗಿ
ಮುನಿಸು ಮುಗಿಲು ಮುಟ್ಟಿತು.

ಪ್ರಸಿದ್ದ ಕಪ್ಪೆಗೂಡಿನ ಕದನಲ್ಲಿ
ನೆಲವೂ ನೀರಾಗಿ
ಚರಿತ್ರೆಗೂ ಚುರುಕು ಮುಟ್ಟಿತು.


ಎಲ್ಲಾ ಮುಗಿಯಿತು
ಮುಗಿದೇ ಹೋಯಿತು ಅನ್ನುವಾಗ….
ಹೀಗೆಯೆ ಒಮ್ಮೆ
ಅಶೋಕನೂ, ಅಕ್ಬರನೂ
ಭೆಟ್ಟಿಯಾದರು.
ಮಾಯದ ಕೈಗಳಿಂದ
ಮರಳಿನ ಕಣಗಳಿಂದ
ಕಪ್ಪೆಗೂಡು ಕಟ್ಟತೊಡಗಿದರು…..
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...