Home / ಕವನ / ಕವಿತೆ / ಗಿಣಿಗೆ ಪಂಜರದ ಹಂಗು ಯಾಕಿಲ್ಲ?

ಗಿಣಿಗೆ ಪಂಜರದ ಹಂಗು ಯಾಕಿಲ್ಲ?

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮುದ್ದು ಮುದ್ದಾಗಿ ಮಾತಾಡಿ
ಸೂರ್‍ಯಂಗೂ ಚಂದ್ರಂಗೂ ಮಂಕುಬೂದಿಯನೆರಚಿ
ಹೂವು, ಎಲೆ, ಗಂಧ ಗಾಳಿಯ
ಗಮನ ಎತ್ತೆತ್ತಲೋ ಸೆಳೆದು
ಚಿಕ್ಕೆಯ ಬಳಗಕ್ಕೆ ಮಾಯಕಿನ್ನರಿ ನುಡಿಸಿ ಮೈಮರೆಸಿ
ನದಿಯೂ ಬೆಟ್ಟವೂ
ಎವೆ ಮುಚ್ಚಿ ಬಿಚ್ಚುವುದರೊಳಗೆ
ಕೋಟಿ ಕ್ರಿಮಿ ಕೀಟಗಳ ಕಣ್ಣಿಗೆ ಕಪ್ಪನೆಯ ಮುಸುಕೆಳೆದು
ಮುಚ್ಚಿರುವಂತೆಯೆ ಪಂಜರಶಾಲೆಯ ಬಾಗಿಲು,
ಭದ್ರ ಬಿಗಿ ಕಾವಲು-ಮಾಯವಾಯಿತಲ್ಲ….

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮತ್ತೊಂದು ಚಣದಲ್ಲಿ
ಗುಲಾಬಿ ರೆಕ್ಕೆ ಹಳದಿ ಕೊಕ್ಕಿನ ಗಿಣಿ
ಮಗದೊಂದು ಚಣದಲ್ಲಿ
ನೀಲಿ ರೆಕ್ಕೆ ಕಪ್ಪು ಕೊಕ್ಕಿನ ಗಿಣಿ
ಗಳಿಗೆಗೊಂದು ಬಣ್ಣ ಮೆತ್ತಿ
ರಂಗಮಂಟಪದೊಳಗೆ ಸುತ್ತಿ
ಮೊಲವಾಗಿ ಛಂಗನೆ ನೆಗೆದು
ಮೇನಕೆಯಾಗಿ ತಕಧಿಂ ಎಂದು ಕುಣಿದು
ಮಾಟಗಾತಿಯ ದಂಡ ಮೆಟ್ಟಿ
ಮಿಂಚಾಗಿ ಮಿಣಿ ಮಿಣಿಗುಟ್ಟಿ
ಮಾಯವಾಗಿಯತಲ್ಲ….

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮರಿಗುಬ್ಬಿಯ ಹಾಗೆ ಗಳಿಗೆಗಳನ್ನು ಗಬಾಯಿಸಿ
ಗೂಬೆಯ ಹಾಗೆ ಗುಕ್ಕೆಂದು ಕೂಗಿ
ಗುಂಗಿಯ ಹುಳುವಾಗಿ ಗೀಗೀ ಪದ ಹಾಡಿ
ಹಾರಿ ಹೋಯಿತಲ್ಲ….

ಅವ್ವ….
ಜಾಲಿಯ ಮರವನ್ನೇರಿಕುಳಿತಿರಬಹುದೆ ಗಿಣಿ?
ಚಂದನದ ಮರದೊಳಗೆ ಕುಳಿತಿರಬಹುದೆ ಗಿಣಿ?
ವೇದ ಶಾಸ್ತ್ರಾಗಮಗಳನ್ನು ನುಚ್ಚಾಗಿಸಿ-ನುಂಗಿ
ಅಣುಬಾಂಬುಗಳನ್ನು ಅತ್ತಿಯ ಹಣ್ಣಾಗಿಸಿ ಮೆದ್ದು
ಪಂಜರದೊಳಗೆಯೆ ಇದ್ದು, ಇಲ್ಲ ಎನಿಸುವ ಹಾಗೆ ಇದ್ದೂ
ಆಟವಾಡುತ್ತಿದೆಯೆ ಗಿಣಿ?

ಅವ್ವ….
ಅಂಬೆಗಾಲಿನ ಕಂದ ಮೋರೆ ತಿರುವಲು ಬೇಡ
ಕುತೂಹಲದ ಕುಡಿ ಚಿವುಟಿಬಿಸಾಡಲು ಬೇಡ
ನವಿಲುಗಣ್ಣಿಗೆ ಸುಣ್ಣ ಹಚ್ಚಲು ಬೇಡ
ಎದೆಯ ಗುಟ್ಟೇನದು ಹೇಳು…. ನಿನ್ನಾಣೆ
ಪಿಳ್ಳಂಗೋವಿ ಊದಿ ಪುಕಾರು ಹಬ್ಬಿಸುವುದಿಲ್ಲ….

ಹೇಳವ್ವ….
ಜಲಬಿಂದುವಿಗೆ ಪದ್ಮಪತ್ರದ ಹಂಗು ಯಾಕಿಲ್ಲ?
ಕಿಂಚಿತ್ತೂ ಪ್ರೀತಿ, ಕಿಂಚಿತ್ತೂ ಮೈತ್ರಿ ಯಾಕಿಲ್ಲ?
ಗಿಳಿಗೆ ಪಂಜರದ ಹಂಗು ಯಾಕಿಲ್ಲ?
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...