ಗಿಣಿಗೆ ಪಂಜರದ ಹಂಗು ಯಾಕಿಲ್ಲ?

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮುದ್ದು ಮುದ್ದಾಗಿ ಮಾತಾಡಿ
ಸೂರ್‍ಯಂಗೂ ಚಂದ್ರಂಗೂ ಮಂಕುಬೂದಿಯನೆರಚಿ
ಹೂವು, ಎಲೆ, ಗಂಧ ಗಾಳಿಯ
ಗಮನ ಎತ್ತೆತ್ತಲೋ ಸೆಳೆದು
ಚಿಕ್ಕೆಯ ಬಳಗಕ್ಕೆ ಮಾಯಕಿನ್ನರಿ ನುಡಿಸಿ ಮೈಮರೆಸಿ
ನದಿಯೂ ಬೆಟ್ಟವೂ
ಎವೆ ಮುಚ್ಚಿ ಬಿಚ್ಚುವುದರೊಳಗೆ
ಕೋಟಿ ಕ್ರಿಮಿ ಕೀಟಗಳ ಕಣ್ಣಿಗೆ ಕಪ್ಪನೆಯ ಮುಸುಕೆಳೆದು
ಮುಚ್ಚಿರುವಂತೆಯೆ ಪಂಜರಶಾಲೆಯ ಬಾಗಿಲು,
ಭದ್ರ ಬಿಗಿ ಕಾವಲು-ಮಾಯವಾಯಿತಲ್ಲ….

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮತ್ತೊಂದು ಚಣದಲ್ಲಿ
ಗುಲಾಬಿ ರೆಕ್ಕೆ ಹಳದಿ ಕೊಕ್ಕಿನ ಗಿಣಿ
ಮಗದೊಂದು ಚಣದಲ್ಲಿ
ನೀಲಿ ರೆಕ್ಕೆ ಕಪ್ಪು ಕೊಕ್ಕಿನ ಗಿಣಿ
ಗಳಿಗೆಗೊಂದು ಬಣ್ಣ ಮೆತ್ತಿ
ರಂಗಮಂಟಪದೊಳಗೆ ಸುತ್ತಿ
ಮೊಲವಾಗಿ ಛಂಗನೆ ನೆಗೆದು
ಮೇನಕೆಯಾಗಿ ತಕಧಿಂ ಎಂದು ಕುಣಿದು
ಮಾಟಗಾತಿಯ ದಂಡ ಮೆಟ್ಟಿ
ಮಿಂಚಾಗಿ ಮಿಣಿ ಮಿಣಿಗುಟ್ಟಿ
ಮಾಯವಾಗಿಯತಲ್ಲ….

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮರಿಗುಬ್ಬಿಯ ಹಾಗೆ ಗಳಿಗೆಗಳನ್ನು ಗಬಾಯಿಸಿ
ಗೂಬೆಯ ಹಾಗೆ ಗುಕ್ಕೆಂದು ಕೂಗಿ
ಗುಂಗಿಯ ಹುಳುವಾಗಿ ಗೀಗೀ ಪದ ಹಾಡಿ
ಹಾರಿ ಹೋಯಿತಲ್ಲ….

ಅವ್ವ….
ಜಾಲಿಯ ಮರವನ್ನೇರಿಕುಳಿತಿರಬಹುದೆ ಗಿಣಿ?
ಚಂದನದ ಮರದೊಳಗೆ ಕುಳಿತಿರಬಹುದೆ ಗಿಣಿ?
ವೇದ ಶಾಸ್ತ್ರಾಗಮಗಳನ್ನು ನುಚ್ಚಾಗಿಸಿ-ನುಂಗಿ
ಅಣುಬಾಂಬುಗಳನ್ನು ಅತ್ತಿಯ ಹಣ್ಣಾಗಿಸಿ ಮೆದ್ದು
ಪಂಜರದೊಳಗೆಯೆ ಇದ್ದು, ಇಲ್ಲ ಎನಿಸುವ ಹಾಗೆ ಇದ್ದೂ
ಆಟವಾಡುತ್ತಿದೆಯೆ ಗಿಣಿ?

ಅವ್ವ….
ಅಂಬೆಗಾಲಿನ ಕಂದ ಮೋರೆ ತಿರುವಲು ಬೇಡ
ಕುತೂಹಲದ ಕುಡಿ ಚಿವುಟಿಬಿಸಾಡಲು ಬೇಡ
ನವಿಲುಗಣ್ಣಿಗೆ ಸುಣ್ಣ ಹಚ್ಚಲು ಬೇಡ
ಎದೆಯ ಗುಟ್ಟೇನದು ಹೇಳು…. ನಿನ್ನಾಣೆ
ಪಿಳ್ಳಂಗೋವಿ ಊದಿ ಪುಕಾರು ಹಬ್ಬಿಸುವುದಿಲ್ಲ….

ಹೇಳವ್ವ….
ಜಲಬಿಂದುವಿಗೆ ಪದ್ಮಪತ್ರದ ಹಂಗು ಯಾಕಿಲ್ಲ?
ಕಿಂಚಿತ್ತೂ ಪ್ರೀತಿ, ಕಿಂಚಿತ್ತೂ ಮೈತ್ರಿ ಯಾಕಿಲ್ಲ?
ಗಿಳಿಗೆ ಪಂಜರದ ಹಂಗು ಯಾಕಿಲ್ಲ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶಬರಿ – ೧೩
Next post ಪ್ರಾಣ

ಸಣ್ಣ ಕತೆ

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಪ್ರಕೃತಿಬಲ

    ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದು… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

cheap jordans|wholesale air max|wholesale jordans|wholesale jewelry|wholesale jerseys