Home / ಕವನ / ಕವಿತೆ / ಗಿಣಿಗೆ ಪಂಜರದ ಹಂಗು ಯಾಕಿಲ್ಲ?

ಗಿಣಿಗೆ ಪಂಜರದ ಹಂಗು ಯಾಕಿಲ್ಲ?

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮುದ್ದು ಮುದ್ದಾಗಿ ಮಾತಾಡಿ
ಸೂರ್‍ಯಂಗೂ ಚಂದ್ರಂಗೂ ಮಂಕುಬೂದಿಯನೆರಚಿ
ಹೂವು, ಎಲೆ, ಗಂಧ ಗಾಳಿಯ
ಗಮನ ಎತ್ತೆತ್ತಲೋ ಸೆಳೆದು
ಚಿಕ್ಕೆಯ ಬಳಗಕ್ಕೆ ಮಾಯಕಿನ್ನರಿ ನುಡಿಸಿ ಮೈಮರೆಸಿ
ನದಿಯೂ ಬೆಟ್ಟವೂ
ಎವೆ ಮುಚ್ಚಿ ಬಿಚ್ಚುವುದರೊಳಗೆ
ಕೋಟಿ ಕ್ರಿಮಿ ಕೀಟಗಳ ಕಣ್ಣಿಗೆ ಕಪ್ಪನೆಯ ಮುಸುಕೆಳೆದು
ಮುಚ್ಚಿರುವಂತೆಯೆ ಪಂಜರಶಾಲೆಯ ಬಾಗಿಲು,
ಭದ್ರ ಬಿಗಿ ಕಾವಲು-ಮಾಯವಾಯಿತಲ್ಲ….

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮತ್ತೊಂದು ಚಣದಲ್ಲಿ
ಗುಲಾಬಿ ರೆಕ್ಕೆ ಹಳದಿ ಕೊಕ್ಕಿನ ಗಿಣಿ
ಮಗದೊಂದು ಚಣದಲ್ಲಿ
ನೀಲಿ ರೆಕ್ಕೆ ಕಪ್ಪು ಕೊಕ್ಕಿನ ಗಿಣಿ
ಗಳಿಗೆಗೊಂದು ಬಣ್ಣ ಮೆತ್ತಿ
ರಂಗಮಂಟಪದೊಳಗೆ ಸುತ್ತಿ
ಮೊಲವಾಗಿ ಛಂಗನೆ ನೆಗೆದು
ಮೇನಕೆಯಾಗಿ ತಕಧಿಂ ಎಂದು ಕುಣಿದು
ಮಾಟಗಾತಿಯ ದಂಡ ಮೆಟ್ಟಿ
ಮಿಂಚಾಗಿ ಮಿಣಿ ಮಿಣಿಗುಟ್ಟಿ
ಮಾಯವಾಗಿಯತಲ್ಲ….

ಅವ್ವ….
ಹಸಿರು ರೆಕ್ಕೆ ಕೆಂಪು ಕೊಕ್ಕಿನ ಗಿಣಿ
ಮರಿಗುಬ್ಬಿಯ ಹಾಗೆ ಗಳಿಗೆಗಳನ್ನು ಗಬಾಯಿಸಿ
ಗೂಬೆಯ ಹಾಗೆ ಗುಕ್ಕೆಂದು ಕೂಗಿ
ಗುಂಗಿಯ ಹುಳುವಾಗಿ ಗೀಗೀ ಪದ ಹಾಡಿ
ಹಾರಿ ಹೋಯಿತಲ್ಲ….

ಅವ್ವ….
ಜಾಲಿಯ ಮರವನ್ನೇರಿಕುಳಿತಿರಬಹುದೆ ಗಿಣಿ?
ಚಂದನದ ಮರದೊಳಗೆ ಕುಳಿತಿರಬಹುದೆ ಗಿಣಿ?
ವೇದ ಶಾಸ್ತ್ರಾಗಮಗಳನ್ನು ನುಚ್ಚಾಗಿಸಿ-ನುಂಗಿ
ಅಣುಬಾಂಬುಗಳನ್ನು ಅತ್ತಿಯ ಹಣ್ಣಾಗಿಸಿ ಮೆದ್ದು
ಪಂಜರದೊಳಗೆಯೆ ಇದ್ದು, ಇಲ್ಲ ಎನಿಸುವ ಹಾಗೆ ಇದ್ದೂ
ಆಟವಾಡುತ್ತಿದೆಯೆ ಗಿಣಿ?

ಅವ್ವ….
ಅಂಬೆಗಾಲಿನ ಕಂದ ಮೋರೆ ತಿರುವಲು ಬೇಡ
ಕುತೂಹಲದ ಕುಡಿ ಚಿವುಟಿಬಿಸಾಡಲು ಬೇಡ
ನವಿಲುಗಣ್ಣಿಗೆ ಸುಣ್ಣ ಹಚ್ಚಲು ಬೇಡ
ಎದೆಯ ಗುಟ್ಟೇನದು ಹೇಳು…. ನಿನ್ನಾಣೆ
ಪಿಳ್ಳಂಗೋವಿ ಊದಿ ಪುಕಾರು ಹಬ್ಬಿಸುವುದಿಲ್ಲ….

ಹೇಳವ್ವ….
ಜಲಬಿಂದುವಿಗೆ ಪದ್ಮಪತ್ರದ ಹಂಗು ಯಾಕಿಲ್ಲ?
ಕಿಂಚಿತ್ತೂ ಪ್ರೀತಿ, ಕಿಂಚಿತ್ತೂ ಮೈತ್ರಿ ಯಾಕಿಲ್ಲ?
ಗಿಳಿಗೆ ಪಂಜರದ ಹಂಗು ಯಾಕಿಲ್ಲ?
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...