Home / ಕವನ / ಕವಿತೆ / ಎಲ್ಲ ಹುಡುಗಿಯರ ಕನಸು

ಎಲ್ಲ ಹುಡುಗಿಯರ ಕನಸು

ಅವ್ವ ಕೇಳೇ ನಾನೊಂದ ಕನಸ ಕಂಡೇ….
ಅವ್ವ ಕೇಳೇ ಕನಸೊಂದ ಕಂಡೆನೆ….
ಮುಂಗೋಳಿ ಕೂಗಿತ್ತು ಮೂಡಲ್ಲಿ ಕೆಂಪಿತ್ತು
ಬೆಳ್ಳಿಯೂ ಮರಳಿತ್ತು ಹಕ್ಕಿಯೂ ಹಾಡಿತ್ತು
ಮಲ್ಲಿಗೆ ಸಂಪಿಗೆ ಘಮ್ಮೆಂದು ಬಿರಿದಿತ್ತು
ಹಾದಿಲಿ ಇಬ್ಬನಿಯು ಮುತ್ತಾಗಿ ಸುರಿದಿತ್ತು. ||ಅವ್ವ||

ಕಣ್ಣರೆಪ್ಪೆ ಬಿಗಿಯೆ ಕದ ತಟ್ಟಿ ಒಳಬಂದ
ಕಾರಿರುಳ ಕೆಂಜೆಡೆಗೆ ಚಂದಿರನ ಮುಡಿದಿದ್ದ
ಕಾಲ್ಗಜ್ಜೆ ಕುಣಿಸುತ್ತ ಶರಣು ಶರಣು ಅಂದ
ಮುಕ್ಕಣ್ಣ ತಾನೆಂದು ಮುಂಗೈಗೆ ಮುತ್ತಿಟ್ಟ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ….
ಮುದ್ದಾಗಿ ಮಾತಾಡಿ ಮರುಳು ಮಾಡಿದನವ್ವ ||ಅವ್ವ||

ತುಂಬೆಯ ಹೂ ಬಿಡಿಸಿ ತುರುಬಿಗೆ ಮುಡಿಸಿದ
ಒಂದೊಂದು ಕಿವಿಯಲ್ಲೂ ದುಂಬಿಯ ಇರಿಸಿದ
ಮಿಂಚಿನ ಹುಳೂವಲ್ಲೇ ಮೂಗುತಿಯ ಮಾಡಿದ
ನೇರಳೆ ಹಣ್ಣಿನ ಹಾರವ ತೊಡಿಸಿದ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ…..
ಮುದ್ದಾಗಿ ಮಾತಾಡಿ ಮರುಳು ಮಾಡಿದನವ್ವ ||ಅವ್ವ||

ಹುಲಿಚರ್‍ಮ ಹೊದ್ದರೂ ಹಾಲುಮನಸಿನ ಹುಡುಗ
ಡೊಳ್ಳ ಬಾರಿಸಿ, ಢಕ್ಕೆಯ ಬಡಿದು, ಡಮರುಗ ನುಡಿಸಿದ
ನವಿಲ ಹಾಗೆ ಕುಣಿದು ಮಿಂಚು ಮಳೆ ಕರೆದ
ಹಕ್ಕಿಪಿಕ್ಕಿಯಂಗೆ ಕೂಗಿ ನಕ್ಕು ನಗಿಸಿದ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ….
ಮುದ್ದಾಗಿ ಮಾತಾಡಿ ಮರಳು ಮಾಡಿದನವ್ವ ||ಅವ್ವ||

ಚಪ್ಪರ ತೋರಣ ಒಡವೆ ಓಲಗವಿಲ್ಲ
ಮಂಟಪ ಮಂಡಿಗೆ ಧಾರೆ ದಿಬ್ಬಣವಿಲ್ಲ
ಆರತಿ ಎತ್ತಲು ಮುತ್ತೈದೆಯರಿಲ್ಲ
ಮಂತ್ರಗಳಿಲ್ಲ ಶಾಸ್ತ್ರಗಳಿಲ್ಲ….
ಮಸಣದೊಳಗೆ ಮದುವಣಗಿತ್ತಿ ನಾನದೆವನವ್ವ….
ಬೂದಿಬಡುಕನ ಬಾಳ ಬೆಳಗಿದನವ್ವ ||ಅವ್ವ||

ಕದಳಿಯ ಬನದೊಳಗೆ ಕಾದಿಹನವ್ವ….
ಕಣಗಿಲೆ ಹೂ ಹಾಸಿ ಕಾದಿಹನವ್ವ….
ಕಣ್ಣ ಬತ್ತಿಯ ಉರಿಸಿ ಕಾದಿಹನವ್ವ….
ಜನುಮ ಜನುಮದ ಒಲವು ಫಲಗೂಡಿತವ್ವ….
ಹುಟ್ಟು-ಸಾವಿನಾಚೆಯ ದಡದಿ ಮನೆ ಮಾಡಿಹನವ್ವ
ತಪ್ಪೋ ಒಪ್ಪೋ ಮನ್ನಿಸಿ ಹರಸವ್ವ
ತಪ್ಪೊ ಒಪ್ಪೋ ಹರಸಿ ನೀ ಕಳಿಸವ್ವ. ||ಅವ್ವ||
*****

Tagged:

Leave a Reply

Your email address will not be published. Required fields are marked *

ಬೆಳಕಿನಿಂದ ಜಗಜಗಿಸುವ ಸಂಜೆ ರಾವು ಬಡಿದಂತೆ ಮಬ್ಬಾಗಿತ್ತು. ಈ ಮಬ್ಬು ಹಿಂದೆಂದೂ ಇದಿಲ್ಲ. ದೇಶದ ಹದಿನೇಳು ವರ್ಷದ ಸ್ವಾತಂತ್ರದಲ್ಲಿ, ಮಧ್ಯಮ ತರಗತಿಯ ಜೀವನ ಕೈ ಬಾಯಿಯಾಗಿದ್ದರೂ ದೂರದ ಆಶಯ ಹೊಂಗಿರಣವೊಂದು ಸದಾ ಹೊಳೆದು ಭಾವೀ ಪೀಳಿಗೆಯ ಮನೋಲ್ಲಾಸ ಮಾಡುತ್ತಿತ್ತು. ಆದರೆ ಈ ಮಬ್ಬುಗತ್ತ...

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...