Home / ಕವನ / ಕವಿತೆ / ಎಲ್ಲ ಹುಡುಗಿಯರ ಕನಸು

ಎಲ್ಲ ಹುಡುಗಿಯರ ಕನಸು

ಅವ್ವ ಕೇಳೇ ನಾನೊಂದ ಕನಸ ಕಂಡೇ….
ಅವ್ವ ಕೇಳೇ ಕನಸೊಂದ ಕಂಡೆನೆ….
ಮುಂಗೋಳಿ ಕೂಗಿತ್ತು ಮೂಡಲ್ಲಿ ಕೆಂಪಿತ್ತು
ಬೆಳ್ಳಿಯೂ ಮರಳಿತ್ತು ಹಕ್ಕಿಯೂ ಹಾಡಿತ್ತು
ಮಲ್ಲಿಗೆ ಸಂಪಿಗೆ ಘಮ್ಮೆಂದು ಬಿರಿದಿತ್ತು
ಹಾದಿಲಿ ಇಬ್ಬನಿಯು ಮುತ್ತಾಗಿ ಸುರಿದಿತ್ತು. ||ಅವ್ವ||

ಕಣ್ಣರೆಪ್ಪೆ ಬಿಗಿಯೆ ಕದ ತಟ್ಟಿ ಒಳಬಂದ
ಕಾರಿರುಳ ಕೆಂಜೆಡೆಗೆ ಚಂದಿರನ ಮುಡಿದಿದ್ದ
ಕಾಲ್ಗಜ್ಜೆ ಕುಣಿಸುತ್ತ ಶರಣು ಶರಣು ಅಂದ
ಮುಕ್ಕಣ್ಣ ತಾನೆಂದು ಮುಂಗೈಗೆ ಮುತ್ತಿಟ್ಟ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ….
ಮುದ್ದಾಗಿ ಮಾತಾಡಿ ಮರುಳು ಮಾಡಿದನವ್ವ ||ಅವ್ವ||

ತುಂಬೆಯ ಹೂ ಬಿಡಿಸಿ ತುರುಬಿಗೆ ಮುಡಿಸಿದ
ಒಂದೊಂದು ಕಿವಿಯಲ್ಲೂ ದುಂಬಿಯ ಇರಿಸಿದ
ಮಿಂಚಿನ ಹುಳೂವಲ್ಲೇ ಮೂಗುತಿಯ ಮಾಡಿದ
ನೇರಳೆ ಹಣ್ಣಿನ ಹಾರವ ತೊಡಿಸಿದ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ…..
ಮುದ್ದಾಗಿ ಮಾತಾಡಿ ಮರುಳು ಮಾಡಿದನವ್ವ ||ಅವ್ವ||

ಹುಲಿಚರ್‍ಮ ಹೊದ್ದರೂ ಹಾಲುಮನಸಿನ ಹುಡುಗ
ಡೊಳ್ಳ ಬಾರಿಸಿ, ಢಕ್ಕೆಯ ಬಡಿದು, ಡಮರುಗ ನುಡಿಸಿದ
ನವಿಲ ಹಾಗೆ ಕುಣಿದು ಮಿಂಚು ಮಳೆ ಕರೆದ
ಹಕ್ಕಿಪಿಕ್ಕಿಯಂಗೆ ಕೂಗಿ ನಕ್ಕು ನಗಿಸಿದ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ….
ಮುದ್ದಾಗಿ ಮಾತಾಡಿ ಮರಳು ಮಾಡಿದನವ್ವ ||ಅವ್ವ||

ಚಪ್ಪರ ತೋರಣ ಒಡವೆ ಓಲಗವಿಲ್ಲ
ಮಂಟಪ ಮಂಡಿಗೆ ಧಾರೆ ದಿಬ್ಬಣವಿಲ್ಲ
ಆರತಿ ಎತ್ತಲು ಮುತ್ತೈದೆಯರಿಲ್ಲ
ಮಂತ್ರಗಳಿಲ್ಲ ಶಾಸ್ತ್ರಗಳಿಲ್ಲ….
ಮಸಣದೊಳಗೆ ಮದುವಣಗಿತ್ತಿ ನಾನದೆವನವ್ವ….
ಬೂದಿಬಡುಕನ ಬಾಳ ಬೆಳಗಿದನವ್ವ ||ಅವ್ವ||

ಕದಳಿಯ ಬನದೊಳಗೆ ಕಾದಿಹನವ್ವ….
ಕಣಗಿಲೆ ಹೂ ಹಾಸಿ ಕಾದಿಹನವ್ವ….
ಕಣ್ಣ ಬತ್ತಿಯ ಉರಿಸಿ ಕಾದಿಹನವ್ವ….
ಜನುಮ ಜನುಮದ ಒಲವು ಫಲಗೂಡಿತವ್ವ….
ಹುಟ್ಟು-ಸಾವಿನಾಚೆಯ ದಡದಿ ಮನೆ ಮಾಡಿಹನವ್ವ
ತಪ್ಪೋ ಒಪ್ಪೋ ಮನ್ನಿಸಿ ಹರಸವ್ವ
ತಪ್ಪೊ ಒಪ್ಪೋ ಹರಸಿ ನೀ ಕಳಿಸವ್ವ. ||ಅವ್ವ||
*****

Tagged:

Leave a Reply

Your email address will not be published. Required fields are marked *

“ಸುಭದ್ರೆ, ನೀನು ಎಂದು….” ದೈನ್ಯವಾಣಿಯಿಂದ ಕೇಳಿಕೊಂಡ ಶ್ರೀಧರ. “ತಡೆ ಶ್ರೀಧರ. ಹ್ಞ. ಹತ್ತಿರ ಬರಬೇಡ. ಪ್ರತಿಯೊಂದು ಕಾರ್ಯಕ್ಕೂ ಮುಹೂರ್ತ ಬರಬೇಕು; ಸ್ವಲ್ಪ ಕಾಲ ತಡೆ. ಒಮ್ಮೆ ಹೇಳಿದೆ: ನಾನು ನಿನ್ನವಳೆಂದು, ನಂಬಿಕೊ.” “ಎಷ್ಟು ದಿನ ಈ ನ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...