Home / ಕವನ / ಕವಿತೆ / ಎಲ್ಲ ಹುಡುಗಿಯರ ಕನಸು

ಎಲ್ಲ ಹುಡುಗಿಯರ ಕನಸು

ಅವ್ವ ಕೇಳೇ ನಾನೊಂದ ಕನಸ ಕಂಡೇ….
ಅವ್ವ ಕೇಳೇ ಕನಸೊಂದ ಕಂಡೆನೆ….
ಮುಂಗೋಳಿ ಕೂಗಿತ್ತು ಮೂಡಲ್ಲಿ ಕೆಂಪಿತ್ತು
ಬೆಳ್ಳಿಯೂ ಮರಳಿತ್ತು ಹಕ್ಕಿಯೂ ಹಾಡಿತ್ತು
ಮಲ್ಲಿಗೆ ಸಂಪಿಗೆ ಘಮ್ಮೆಂದು ಬಿರಿದಿತ್ತು
ಹಾದಿಲಿ ಇಬ್ಬನಿಯು ಮುತ್ತಾಗಿ ಸುರಿದಿತ್ತು. ||ಅವ್ವ||

ಕಣ್ಣರೆಪ್ಪೆ ಬಿಗಿಯೆ ಕದ ತಟ್ಟಿ ಒಳಬಂದ
ಕಾರಿರುಳ ಕೆಂಜೆಡೆಗೆ ಚಂದಿರನ ಮುಡಿದಿದ್ದ
ಕಾಲ್ಗಜ್ಜೆ ಕುಣಿಸುತ್ತ ಶರಣು ಶರಣು ಅಂದ
ಮುಕ್ಕಣ್ಣ ತಾನೆಂದು ಮುಂಗೈಗೆ ಮುತ್ತಿಟ್ಟ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ….
ಮುದ್ದಾಗಿ ಮಾತಾಡಿ ಮರುಳು ಮಾಡಿದನವ್ವ ||ಅವ್ವ||

ತುಂಬೆಯ ಹೂ ಬಿಡಿಸಿ ತುರುಬಿಗೆ ಮುಡಿಸಿದ
ಒಂದೊಂದು ಕಿವಿಯಲ್ಲೂ ದುಂಬಿಯ ಇರಿಸಿದ
ಮಿಂಚಿನ ಹುಳೂವಲ್ಲೇ ಮೂಗುತಿಯ ಮಾಡಿದ
ನೇರಳೆ ಹಣ್ಣಿನ ಹಾರವ ತೊಡಿಸಿದ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ…..
ಮುದ್ದಾಗಿ ಮಾತಾಡಿ ಮರುಳು ಮಾಡಿದನವ್ವ ||ಅವ್ವ||

ಹುಲಿಚರ್‍ಮ ಹೊದ್ದರೂ ಹಾಲುಮನಸಿನ ಹುಡುಗ
ಡೊಳ್ಳ ಬಾರಿಸಿ, ಢಕ್ಕೆಯ ಬಡಿದು, ಡಮರುಗ ನುಡಿಸಿದ
ನವಿಲ ಹಾಗೆ ಕುಣಿದು ಮಿಂಚು ಮಳೆ ಕರೆದ
ಹಕ್ಕಿಪಿಕ್ಕಿಯಂಗೆ ಕೂಗಿ ನಕ್ಕು ನಗಿಸಿದ
ಕೀಟಲೆ ನಗೆ ನಕ್ಕು ಕಪ್ಪರವ ಮುಂದಿಟ್ಟ
ಒಲ್ಲೆ ಎಂದರೂ ಬಿಡದೆ ಒಲವು ಬೇಡಿದನವ್ವ….
ಮುದ್ದಾಗಿ ಮಾತಾಡಿ ಮರಳು ಮಾಡಿದನವ್ವ ||ಅವ್ವ||

ಚಪ್ಪರ ತೋರಣ ಒಡವೆ ಓಲಗವಿಲ್ಲ
ಮಂಟಪ ಮಂಡಿಗೆ ಧಾರೆ ದಿಬ್ಬಣವಿಲ್ಲ
ಆರತಿ ಎತ್ತಲು ಮುತ್ತೈದೆಯರಿಲ್ಲ
ಮಂತ್ರಗಳಿಲ್ಲ ಶಾಸ್ತ್ರಗಳಿಲ್ಲ….
ಮಸಣದೊಳಗೆ ಮದುವಣಗಿತ್ತಿ ನಾನದೆವನವ್ವ….
ಬೂದಿಬಡುಕನ ಬಾಳ ಬೆಳಗಿದನವ್ವ ||ಅವ್ವ||

ಕದಳಿಯ ಬನದೊಳಗೆ ಕಾದಿಹನವ್ವ….
ಕಣಗಿಲೆ ಹೂ ಹಾಸಿ ಕಾದಿಹನವ್ವ….
ಕಣ್ಣ ಬತ್ತಿಯ ಉರಿಸಿ ಕಾದಿಹನವ್ವ….
ಜನುಮ ಜನುಮದ ಒಲವು ಫಲಗೂಡಿತವ್ವ….
ಹುಟ್ಟು-ಸಾವಿನಾಚೆಯ ದಡದಿ ಮನೆ ಮಾಡಿಹನವ್ವ
ತಪ್ಪೋ ಒಪ್ಪೋ ಮನ್ನಿಸಿ ಹರಸವ್ವ
ತಪ್ಪೊ ಒಪ್ಪೋ ಹರಸಿ ನೀ ಕಳಿಸವ್ವ. ||ಅವ್ವ||
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...