Home / ಕವನ / ಕವಿತೆ / ಹೊಳೆ ಮಗಳು

ಹೊಳೆ ಮಗಳು

ಅವಳು ಹಳ್ಳ
ಇವಳು ಹೊಳೆ

ಹಳ್ಳದ ಬಳ್ಳಯಲಿ
ಹರಿದು ಬಂದವಳು
ಹೊಳೆ ಮಗಳು

ತಾಯಿ-
ಹೊಳೆ ಮಗಳ ಹುಬ್ಬನು ತೀಡುವಳು
ಸುಳಿ ಮುಂಗುರುಳ ಬಾಚುವಳು
ದಿಟ್ಟಿಯ ಬೊಟ್ಟಿಟ್ಟು
ಅಕ್ಕರೆಯ ಮುತ್ತಿಟ್ಟು
ಮುನ್ನಡೆಸುವಳು

ಇದು ಬೆಟ್ಟ ಇದು ಗಾಳಿ
ಇದು ಹೂವು ಇದು ಎಲೆ
ಎಂದು ಮಗಳಿಗೆ
ಪರಿಚಯಿಸುವಳು

ಮಗಳು-
ಕಲಿಯುವಳು
ಗಿಡ ಮರಗಳ ಅಡಿಯಲಿ ಬಾಗಿ
ಕಣಿವೆ ಕೊರಕಲು ಬಂಡೆ
ಹಾದಿಯಲಿ ಬಳುಕಿ ಸಾಗುವಳು

ಅವ್ವನಿಗೆ ತೋರುವಳು
ಸಂಭ್ರಮಿಸಿ ಹೇಳುವಳು
ನಕ್ಷತ್ರ ಗಣವಿರುವುದು
ನನ್ನೊಳಗೆ
ಚಂದಿರನಿರುವನು ತಳಗೆ

ತಾಯಿ ನಸುನಕ್ಕು-
ಸಣ್ಣನೆಯ ದನಿಯವಳೆ
ನುಣ್ಣನೆಯ ನಡೆಯವಳೆ
ನನ್ನ ಕರುಳಿನ ಕುಡಿಯೆ
ನನ್ನ ಆಶೆಯ ಕಿಡಿಯೆ
ಎಂದು ಮಗಳ ಮುದ್ದಾಡುವಳು

ತಾಯಿ ಎಚ್ಚರಿಸುವಳು:
ಚಿಣ್ಣರನು ಮುಳುಗಿಸದಿರು
ಮೀನುಗಳ ಒಣಗಿಸದಿರು
ಕಲ್ಲುಗಳ ಮಿದುಗೊಳಿಸಿ
ಸಹನೆಯಲಿ ನೀರುಣಿಸಿ
ಹರಿವ ಹಾದಿಯಲ್ಲೆಲ್ಲ
ಜೀವ ದೀಪವನುರಿಸು

ವಿಷಕಂಠನನುಸರಿಸಿ
ಕೊಳೆ ಕಳಂಕವ ಧರಿಸಿ
ಕಾಳಿಯಾವೇಶವ ತಾಳಿ
ಕೇಡಿನೆದೆಗೂಡ ಸೆಳೆದು
ಮಡುವಿನಲಿ ಮುಳುಗಿಸು

ಸೂರ್‍ಯನ ಕರುಣೆ
ನೆಲದ ಋಣ
ತಾಯ ಹರಕೆ
ಕೊನೆವರೆಗೆ ಕಾಯುವುದು

ತಾಯಿ
ನಿಂತಲ್ಲೆ ನಿಲ್ಲುವಳು
ತಪಸ್ವಿನಿ
‘ತಾವರೆ’ ಈಗವಳು

ಹಳ್ಳದ ಬಳ್ಳಿಯನು ಕಡಿದು
ಕಣ್ಣೀರ ತಡೆ ತಡೆದು
ಮುಂದೆ ಸಾಗುವಳು
ಹಿಂದೆ ನೋಡುವಳು
ಹೊಳೆ ಮಗಳು……
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...