ಹಪ್ಪಳದ ಕತೆ

ಉಕ್ಕರಿಸಿದೆ
ಹಿಟ್ಟು
ಮಿದುವಾಯಿತು
ಚೆನ್ನಾಗಿ ನಾದು
ಲಟ್ಟಿಸಿದೆ
ಹಪ್ಪಳವಾಯಿತು

ಲಟ್ಟಿಸಿದಂತೆ
ದಿಟ್ಟಿಸುತ
ತನಗೆ ತಾನೆ ಎಂಬಂತೆ
ಎಲ್ಲಿಂದ ಬಂದೆ?
ಎಂದು ಹಪ್ಪಳವೆ ಕೇಳಿತು

ಬೀಜ, ಸಸಿ, ತೆನೆ
ಕಾಳು, ಬೇಳೆ
ಬೆವರು ಹಸಿವು
ನೀರು ನೆಲ ಭೂಮಂಡಲ
ಉಂಡೆ ಉಂಡೆಯಾಗಿ
ಹಪ್ಪಳವೆ ತಾನಾಗಿ
ಕತೆ ಸಾಗಿತು

ಸೂರ್‍ಯ ಬೆಳಕು ಹಾಯಿಸಿ
ಹಪ್ಪಳವನ್ನೂ ನನ್ನನ್ನೂ
ಹದವಾಗಿ ಒಣಗಿಸಿದ

ಮಾತಾಡದೆ ಮುನ್ನಡೆದ
ಕಣ್ಣೆದುರೆ ಕರಗಿದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಿಜಯ ವಿಲಾಸ – ಷಷ್ಠ ತರಂಗ
Next post ಅಕ್ಕರೆ

ಸಣ್ಣ ಕತೆ

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ನಂಟಿನ ಕೊನೆಯ ಬಲ್ಲವರಾರು?

    ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…