Home / ಕವನ / ಕವಿತೆ / ಪುಟ್ಟ ಕೆಂಚವ್ವ

ಪುಟ್ಟ ಕೆಂಚವ್ವ

ಹೊತ್ತಾರೆ ಸೂರ್‍ಯನ ಕಿರಣಗಳು ಮುತ್ತಿಡಲು
ಹಾಳು ಹಕ್ಕಿಯ ಹಾಡು ಕಿವಿ ತುಂಬಲು
ಕಿಸುರುಗಣ್ಣನು ತೆರೆದು ಸೆಟೆದ ಹೂ-ಮೈಯ ಮುರಿದು
ಆಕಳಿಸುವಳು ನಮ್ಮ ಪುಟ್ಟ ಕೆಂಚವ್ವ…..

ಚೂರು ಅಂಗಳವನೆ ಪರಪರ ಕೆರೆದು
ಒಡೆದ ಗಡಿಗೆಯ ಸೊಂಟಕ್ಕೆ ಕರೆದು
ಊರ ಗಟ್ಟಿಗಿತ್ತಿಯರೊಡನೆ ಗುದ್ದಾಡಿ
ನೀರು ತರುವಳು ನಮ್ಮ ಪುಟ್ಟ ಕೆಂಚವ್ವ…..

ಕರವೀರದ ಕೊಂಬೆಗಳ ಕಡಿದು
ಒಣಗಿದ ರೆಂಬೆಗಳನು ಬಡಿದು
ಕಡ್ಡಿ-ಪುರಳೆಯ ಒಟ್ಟಿಗೆ ಒಗೆದು
ಬೆಂಕಿ ಉರಿಸುವಳು ನಮ್ಮ ಪುಟ್ಟ ಕೆಂಚವ್ವ…..

ಚಟಾಕು ಹಾಲಿಗೆ ಚಿಟಿಕೆ ಪುಡಿಯನು ಬೆರೆಸಿ
ಪಾವು ನೀರನೆ ಸುರಿದು
ಘಮ್ಮೆನ್ನುವ ಹಾಗೆ ಟೀ ಕುದಿಸುವಳು
ಮಾಯಾವಿ ಹುಡುಗಿ ನಮ್ಮ ಪುಟ್ಟ ಕೆಂಚವ್ವ…..

ಹೊಲದಲ್ಲಿ ಸಂಜೆಯ ತನಕ ದುಡಿದು
ಅಕ್ಕಿ-ಮೆಣಸಿನಕಾಯಿ ಪಡೆದು
ತಮ್ಮನ ಬಾಯ ಚಪಲಕ್ಕೆ ಉದ್ದು-ಕಡಲೆಯ
ಕದ್ದು ತರುವಳು ನಮ್ಮ ಪುಟ್ಟ ಕೆಂಚವ್ವ…..

ದಾರಿಯಲಿ ಅಂತರಗಟ್ಟಮ್ಮನಿಗೆ ಕೈ ಮುಗಿವಳು
ಹೊಟ್ಟೆ ಬಟ್ಟೆಗಿಟ್ಟು ಮಡುಗು ಎಂದು ಬೇಡುವಳು
ಹಕ್ಕಿ ಗೂಡಿಗೆ ಮರಳುವಂತೆ
ಗುಡಲಿಗೆ ಮರಳುವಳು ನಮ್ಮ ಪುಟ್ಟ ಕೆಂಚವ್ವ…..

ಸೋರುವ ಬುಡ್ಡಿಯನೂ ಒಲಿಸಿ ಉರಿಸುವಳು
ಪಾವಕ್ಕಿಯಲಿ ತಂಗಿ ತಮ್ಮನ ಹೊಟ್ಟೆ ತೂಗಿಸುವಳು
ಹರಿದ ಹಚ್ಚಡವನೆ ಸಮನಾಗಿ ಎಲ್ಲರಿಗೆ ಹೊದಿಸಿ
ಕೈ ಚಳಕ ಮೆರೆವಳು ನಮ್ಮ ಪುಟ್ಟ ಕೆಂಚವ್ವ…..

ಅಪ್ಪನ ಕುಡಿತ-ಜೂಜಿಗೆ ಬೆದರುವಳು
ಅವ್ವನ ದಮ್ಮು-ಗೂರಲಿಗೆ ನೋಯುವಳು
ಸಿಟ್ಟಿನಲಿ ಕಟ್ಟಿರುವೆ, ಚಿಟ್ಟೆ ನಗೆಯವಳು
ದಿಟ್ಟ ನಡೆಯವಳು ನಮ್ಮ ಪುಟ್ಟ ಕೆಂಚವ್ವ…..

ಹೂವಿನ ವಾಸನೆ ಹಿಡಿದು ಹೆಸರು ಹೇಳುವಳು
ಹಕ್ಕಿಯ ಕೂಗನಳೆದು ಅಣಕಿಸುವಳು
ಎರೆಮಣ್ಣನು ಕಲಸಿ ಬೊಂಬೆಯ ಮಾಡುವಳು
ಬೊಂಬೆಗೂ ಜೀವ ಕೊಡುವಳು ನಮ್ಮ ಪುಟ್ಟ ಕೆಂಚವ್ವ…..

ಹುಲಿಯನಿಗೆ ಹಳ್ಳದಲಿ ಮಜ್ಜನ ಮಾಡಿಸುವಳು
ಭೂತಾಯಿ ಮೀನ ಕಿರುಬೆರಳಲಿ ಕುಣಿಸುವಳು
ಗಟ್ಟಿ ಗುಂಡಿಗೆಯವಳು ಕಾಳವ್ವನ
‘ಕಿಡಿ’ ಇವಳು ನಮ್ಮ ಪುಟ್ಟ ಕೆಂಚವ್ವ…..
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...