Home / ಕವನ / ಕವಿತೆ / ಪುಟ್ಟ ಕೆಂಚವ್ವ

ಪುಟ್ಟ ಕೆಂಚವ್ವ

ಹೊತ್ತಾರೆ ಸೂರ್‍ಯನ ಕಿರಣಗಳು ಮುತ್ತಿಡಲು
ಹಾಳು ಹಕ್ಕಿಯ ಹಾಡು ಕಿವಿ ತುಂಬಲು
ಕಿಸುರುಗಣ್ಣನು ತೆರೆದು ಸೆಟೆದ ಹೂ-ಮೈಯ ಮುರಿದು
ಆಕಳಿಸುವಳು ನಮ್ಮ ಪುಟ್ಟ ಕೆಂಚವ್ವ…..

ಚೂರು ಅಂಗಳವನೆ ಪರಪರ ಕೆರೆದು
ಒಡೆದ ಗಡಿಗೆಯ ಸೊಂಟಕ್ಕೆ ಕರೆದು
ಊರ ಗಟ್ಟಿಗಿತ್ತಿಯರೊಡನೆ ಗುದ್ದಾಡಿ
ನೀರು ತರುವಳು ನಮ್ಮ ಪುಟ್ಟ ಕೆಂಚವ್ವ…..

ಕರವೀರದ ಕೊಂಬೆಗಳ ಕಡಿದು
ಒಣಗಿದ ರೆಂಬೆಗಳನು ಬಡಿದು
ಕಡ್ಡಿ-ಪುರಳೆಯ ಒಟ್ಟಿಗೆ ಒಗೆದು
ಬೆಂಕಿ ಉರಿಸುವಳು ನಮ್ಮ ಪುಟ್ಟ ಕೆಂಚವ್ವ…..

ಚಟಾಕು ಹಾಲಿಗೆ ಚಿಟಿಕೆ ಪುಡಿಯನು ಬೆರೆಸಿ
ಪಾವು ನೀರನೆ ಸುರಿದು
ಘಮ್ಮೆನ್ನುವ ಹಾಗೆ ಟೀ ಕುದಿಸುವಳು
ಮಾಯಾವಿ ಹುಡುಗಿ ನಮ್ಮ ಪುಟ್ಟ ಕೆಂಚವ್ವ…..

ಹೊಲದಲ್ಲಿ ಸಂಜೆಯ ತನಕ ದುಡಿದು
ಅಕ್ಕಿ-ಮೆಣಸಿನಕಾಯಿ ಪಡೆದು
ತಮ್ಮನ ಬಾಯ ಚಪಲಕ್ಕೆ ಉದ್ದು-ಕಡಲೆಯ
ಕದ್ದು ತರುವಳು ನಮ್ಮ ಪುಟ್ಟ ಕೆಂಚವ್ವ…..

ದಾರಿಯಲಿ ಅಂತರಗಟ್ಟಮ್ಮನಿಗೆ ಕೈ ಮುಗಿವಳು
ಹೊಟ್ಟೆ ಬಟ್ಟೆಗಿಟ್ಟು ಮಡುಗು ಎಂದು ಬೇಡುವಳು
ಹಕ್ಕಿ ಗೂಡಿಗೆ ಮರಳುವಂತೆ
ಗುಡಲಿಗೆ ಮರಳುವಳು ನಮ್ಮ ಪುಟ್ಟ ಕೆಂಚವ್ವ…..

ಸೋರುವ ಬುಡ್ಡಿಯನೂ ಒಲಿಸಿ ಉರಿಸುವಳು
ಪಾವಕ್ಕಿಯಲಿ ತಂಗಿ ತಮ್ಮನ ಹೊಟ್ಟೆ ತೂಗಿಸುವಳು
ಹರಿದ ಹಚ್ಚಡವನೆ ಸಮನಾಗಿ ಎಲ್ಲರಿಗೆ ಹೊದಿಸಿ
ಕೈ ಚಳಕ ಮೆರೆವಳು ನಮ್ಮ ಪುಟ್ಟ ಕೆಂಚವ್ವ…..

ಅಪ್ಪನ ಕುಡಿತ-ಜೂಜಿಗೆ ಬೆದರುವಳು
ಅವ್ವನ ದಮ್ಮು-ಗೂರಲಿಗೆ ನೋಯುವಳು
ಸಿಟ್ಟಿನಲಿ ಕಟ್ಟಿರುವೆ, ಚಿಟ್ಟೆ ನಗೆಯವಳು
ದಿಟ್ಟ ನಡೆಯವಳು ನಮ್ಮ ಪುಟ್ಟ ಕೆಂಚವ್ವ…..

ಹೂವಿನ ವಾಸನೆ ಹಿಡಿದು ಹೆಸರು ಹೇಳುವಳು
ಹಕ್ಕಿಯ ಕೂಗನಳೆದು ಅಣಕಿಸುವಳು
ಎರೆಮಣ್ಣನು ಕಲಸಿ ಬೊಂಬೆಯ ಮಾಡುವಳು
ಬೊಂಬೆಗೂ ಜೀವ ಕೊಡುವಳು ನಮ್ಮ ಪುಟ್ಟ ಕೆಂಚವ್ವ…..

ಹುಲಿಯನಿಗೆ ಹಳ್ಳದಲಿ ಮಜ್ಜನ ಮಾಡಿಸುವಳು
ಭೂತಾಯಿ ಮೀನ ಕಿರುಬೆರಳಲಿ ಕುಣಿಸುವಳು
ಗಟ್ಟಿ ಗುಂಡಿಗೆಯವಳು ಕಾಳವ್ವನ
‘ಕಿಡಿ’ ಇವಳು ನಮ್ಮ ಪುಟ್ಟ ಕೆಂಚವ್ವ…..
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...