Home / ಕವನ / ಕವಿತೆ / ಮೊಟ್ಟೆ

ಮೊಟ್ಟೆ

ಪಂಚೇಂದ್ರಿಯಗಳಿಗೆ ಒಲಿದು ಅವು ಹೇಳಿದ ಹಾಗೆ ನಲಿದು
ಕುಣಿ ಅಂದರೆ ಕುಣಿದು ಕಾಡಿ ಬೇಡಿ ಪಡೆದೆ
ಮಿರಿಮಿರಿ ಮಿಂಚೊ ಮೊಟ್ಟೆ, ಕಿಚ್ಚಾ ಹಚ್ಚೊ ಮೊಟ್ಟೆ

ಕಳ್ಳುಬಳ್ಳಿಯಾ ಹಂಗಿಲ್ಲದಾ ಮೊಟ್ಟೆ, ನಿಲುವು ನಡೆಯಿಲ್ಲದಾ ಮೊಟ್ಟೆ
ಒತ್ತಿದರೂ ಒಡೆಯದೆ ಕುಟ್ಟಿದರೂ ಸಿಡಿಯದೆ
ಮಂಕುಬೂದಿಯನೆರಚಿ ಮಿಕನನ್ನಾಗಿಸಿ ಮಣಿಸಿ
ಬೆರಕಿ ಗುಣವ ಕಲಿಸಿ ನಕ್ಕಿತವ್ವಾ ಮೊಟ್ಟೆ
ಮಿರ್‍ರನೆ ಮಿಂಚೊ ಮೊಟ್ಟೆ, ಮಾಯಾ ನಗರಿಯ ಮೊಟ್ಟೆ

ಕಣ್ಣಲಿ ಹಳ್ಳವ ಅಗೆದು ಮೂಗಿಗೆ ದಾರವ ಬಿಗಿದು
ಕಿವಿಯಾ ಕಚ್ಚಿ ನಾಲಗೆ ಚುಚ್ಚಿ ಬಾಯ ಮುಚ್ಚಿ
ದೆಯ್ಯ ಮೆಟ್ಟಿದ ಹಾಗೆ ಮೈಯಾ ಮೆಟ್ಟಿಕೊಂಡು
ಬದುಕಾ ನರಕಾ ಮಾಡಿ ಕೊಕ್ಕಿತವ್ವಾ ಮೊಟ್ಟೆ
ಮಿರಿಮಿರಿ ಮಿಂಚೊ ಮೊಟ್ಟೆ, ತಿಳಿವನು ತಿರುಚೊ ಮೊಟ್ಟೆ

ಕೊಡವಿದ್ದಕ್ಕೇ ಹೊರಳಿ ಕೆಡವಿದಕ್ಕೇ ಕೆರಳಿ
ಛಂಗನೆ ಮೇಲೆ ನೆಗೆದು ನೆತ್ತಿಯ ಮೇಲೆ ಕುಣಿದು
ಸರಸರ ಒಳಗೆ ಇಳಿದು ಬತ್ತಿಯ ಹಾಗೆ ಉರಿದು
ಸುಡುಸುಡು ಅಂತು ಮೊಟ್ಟೆ ಸುಟ್ಟಿತವ್ವಾ ಹೊಟ್ಟೆ
ಮಿರ್‍ರನೆ ಮಿಂಚೊ ಮೊಟ್ಟೆ, ನಂಜನು ಉಣಿಸೊ ಮೊಟ್ಟೆ

ಮಾಟವ ಮಾಡಿದೆ ಮಂತ್ರವ ಹಾಕಿದೆ
ಹರಕೆಯ ಹೊತ್ತು ಮುಡಿಪನು ಕಟ್ಟಿದೆ
ಹೋದೆ… ಹೋದೆ… ಅಂದು, ಒಮ್ಮೆಗೆ ಒಳಗೇ ಬಂದು
ಮುಳ್ಳಿನ ಹಾಗೆ ಮೊನೆದೂ, ನಟ್ಟಿತವ್ವಾ ಮೊಟ್ಟೆ
ಮಿರಿಮಿರಿ ಮಿಂಚೊ ಮೊಟ್ಟೆ, ಮೂಜಗ ಮುಕ್ಕಿದ ಮೊಟ್ಟೆ

ಕೆಟ್ಟೇ ಅನಿಸಿತು ಬಿಡುಗಡೆ ಬಯಸಿತು
ಹೃದಯವು ಕಲಿಸಿತು ಅರಿವದು ಉಳಿಸಿತು
ಧೂಪಾ ಹಚ್ಚಿ ದೀಪಾ ಬೆಳಗಿ ಹೂಗಳನೇರಿಸಿ
ತಟ್ಟೆಯಲ್ಲಿಟ್ಟು ಶಿವನಿಗೆ ಕೊಟ್ಟೆ
ಗಲ್ಲವ ಬಡಿದು ಬೆಲ್ಲದ ಮಾತಲಿ ಮೊರೆಯನು ಇಟ್ಟೆ

ಎಲ್ಲೇ ಹುಡುಗಿ ಮೊಟ್ಟೆ? ಎಲ್ಲೇ ಹುಡುಗಿ ಮೊಟ್ಟೆ?
ನನಗೆ ನಾನೆ ಕೇಳುವೆ, ನನಗೆ ನಾನೆ ಹೇಳುವೆ
ಮುಕ್ಕಣ್ಣನಿಗೆ ಕೊಟ್ಟು ಕೈಯ ಮುಗಿದು ಬಿಟ್ಟೆ.
*****

Tagged:

Leave a Reply

Your email address will not be published. Required fields are marked *

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್ಮ ಕೇರಿಯ ಎದುರಿನ ಗುಡ್ಡೆಯನ್ನು ಹತ್...