Home / ಕವನ / ಕವಿತೆ / ಮೊಟ್ಟೆ

ಮೊಟ್ಟೆ

ಪಂಚೇಂದ್ರಿಯಗಳಿಗೆ ಒಲಿದು ಅವು ಹೇಳಿದ ಹಾಗೆ ನಲಿದು
ಕುಣಿ ಅಂದರೆ ಕುಣಿದು ಕಾಡಿ ಬೇಡಿ ಪಡೆದೆ
ಮಿರಿಮಿರಿ ಮಿಂಚೊ ಮೊಟ್ಟೆ, ಕಿಚ್ಚಾ ಹಚ್ಚೊ ಮೊಟ್ಟೆ

ಕಳ್ಳುಬಳ್ಳಿಯಾ ಹಂಗಿಲ್ಲದಾ ಮೊಟ್ಟೆ, ನಿಲುವು ನಡೆಯಿಲ್ಲದಾ ಮೊಟ್ಟೆ
ಒತ್ತಿದರೂ ಒಡೆಯದೆ ಕುಟ್ಟಿದರೂ ಸಿಡಿಯದೆ
ಮಂಕುಬೂದಿಯನೆರಚಿ ಮಿಕನನ್ನಾಗಿಸಿ ಮಣಿಸಿ
ಬೆರಕಿ ಗುಣವ ಕಲಿಸಿ ನಕ್ಕಿತವ್ವಾ ಮೊಟ್ಟೆ
ಮಿರ್‍ರನೆ ಮಿಂಚೊ ಮೊಟ್ಟೆ, ಮಾಯಾ ನಗರಿಯ ಮೊಟ್ಟೆ

ಕಣ್ಣಲಿ ಹಳ್ಳವ ಅಗೆದು ಮೂಗಿಗೆ ದಾರವ ಬಿಗಿದು
ಕಿವಿಯಾ ಕಚ್ಚಿ ನಾಲಗೆ ಚುಚ್ಚಿ ಬಾಯ ಮುಚ್ಚಿ
ದೆಯ್ಯ ಮೆಟ್ಟಿದ ಹಾಗೆ ಮೈಯಾ ಮೆಟ್ಟಿಕೊಂಡು
ಬದುಕಾ ನರಕಾ ಮಾಡಿ ಕೊಕ್ಕಿತವ್ವಾ ಮೊಟ್ಟೆ
ಮಿರಿಮಿರಿ ಮಿಂಚೊ ಮೊಟ್ಟೆ, ತಿಳಿವನು ತಿರುಚೊ ಮೊಟ್ಟೆ

ಕೊಡವಿದ್ದಕ್ಕೇ ಹೊರಳಿ ಕೆಡವಿದಕ್ಕೇ ಕೆರಳಿ
ಛಂಗನೆ ಮೇಲೆ ನೆಗೆದು ನೆತ್ತಿಯ ಮೇಲೆ ಕುಣಿದು
ಸರಸರ ಒಳಗೆ ಇಳಿದು ಬತ್ತಿಯ ಹಾಗೆ ಉರಿದು
ಸುಡುಸುಡು ಅಂತು ಮೊಟ್ಟೆ ಸುಟ್ಟಿತವ್ವಾ ಹೊಟ್ಟೆ
ಮಿರ್‍ರನೆ ಮಿಂಚೊ ಮೊಟ್ಟೆ, ನಂಜನು ಉಣಿಸೊ ಮೊಟ್ಟೆ

ಮಾಟವ ಮಾಡಿದೆ ಮಂತ್ರವ ಹಾಕಿದೆ
ಹರಕೆಯ ಹೊತ್ತು ಮುಡಿಪನು ಕಟ್ಟಿದೆ
ಹೋದೆ… ಹೋದೆ… ಅಂದು, ಒಮ್ಮೆಗೆ ಒಳಗೇ ಬಂದು
ಮುಳ್ಳಿನ ಹಾಗೆ ಮೊನೆದೂ, ನಟ್ಟಿತವ್ವಾ ಮೊಟ್ಟೆ
ಮಿರಿಮಿರಿ ಮಿಂಚೊ ಮೊಟ್ಟೆ, ಮೂಜಗ ಮುಕ್ಕಿದ ಮೊಟ್ಟೆ

ಕೆಟ್ಟೇ ಅನಿಸಿತು ಬಿಡುಗಡೆ ಬಯಸಿತು
ಹೃದಯವು ಕಲಿಸಿತು ಅರಿವದು ಉಳಿಸಿತು
ಧೂಪಾ ಹಚ್ಚಿ ದೀಪಾ ಬೆಳಗಿ ಹೂಗಳನೇರಿಸಿ
ತಟ್ಟೆಯಲ್ಲಿಟ್ಟು ಶಿವನಿಗೆ ಕೊಟ್ಟೆ
ಗಲ್ಲವ ಬಡಿದು ಬೆಲ್ಲದ ಮಾತಲಿ ಮೊರೆಯನು ಇಟ್ಟೆ

ಎಲ್ಲೇ ಹುಡುಗಿ ಮೊಟ್ಟೆ? ಎಲ್ಲೇ ಹುಡುಗಿ ಮೊಟ್ಟೆ?
ನನಗೆ ನಾನೆ ಕೇಳುವೆ, ನನಗೆ ನಾನೆ ಹೇಳುವೆ
ಮುಕ್ಕಣ್ಣನಿಗೆ ಕೊಟ್ಟು ಕೈಯ ಮುಗಿದು ಬಿಟ್ಟೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...