Home / ಕವನ / ಕವಿತೆ / ಮೊಟ್ಟೆ

ಮೊಟ್ಟೆ

ಪಂಚೇಂದ್ರಿಯಗಳಿಗೆ ಒಲಿದು ಅವು ಹೇಳಿದ ಹಾಗೆ ನಲಿದು
ಕುಣಿ ಅಂದರೆ ಕುಣಿದು ಕಾಡಿ ಬೇಡಿ ಪಡೆದೆ
ಮಿರಿಮಿರಿ ಮಿಂಚೊ ಮೊಟ್ಟೆ, ಕಿಚ್ಚಾ ಹಚ್ಚೊ ಮೊಟ್ಟೆ

ಕಳ್ಳುಬಳ್ಳಿಯಾ ಹಂಗಿಲ್ಲದಾ ಮೊಟ್ಟೆ, ನಿಲುವು ನಡೆಯಿಲ್ಲದಾ ಮೊಟ್ಟೆ
ಒತ್ತಿದರೂ ಒಡೆಯದೆ ಕುಟ್ಟಿದರೂ ಸಿಡಿಯದೆ
ಮಂಕುಬೂದಿಯನೆರಚಿ ಮಿಕನನ್ನಾಗಿಸಿ ಮಣಿಸಿ
ಬೆರಕಿ ಗುಣವ ಕಲಿಸಿ ನಕ್ಕಿತವ್ವಾ ಮೊಟ್ಟೆ
ಮಿರ್‍ರನೆ ಮಿಂಚೊ ಮೊಟ್ಟೆ, ಮಾಯಾ ನಗರಿಯ ಮೊಟ್ಟೆ

ಕಣ್ಣಲಿ ಹಳ್ಳವ ಅಗೆದು ಮೂಗಿಗೆ ದಾರವ ಬಿಗಿದು
ಕಿವಿಯಾ ಕಚ್ಚಿ ನಾಲಗೆ ಚುಚ್ಚಿ ಬಾಯ ಮುಚ್ಚಿ
ದೆಯ್ಯ ಮೆಟ್ಟಿದ ಹಾಗೆ ಮೈಯಾ ಮೆಟ್ಟಿಕೊಂಡು
ಬದುಕಾ ನರಕಾ ಮಾಡಿ ಕೊಕ್ಕಿತವ್ವಾ ಮೊಟ್ಟೆ
ಮಿರಿಮಿರಿ ಮಿಂಚೊ ಮೊಟ್ಟೆ, ತಿಳಿವನು ತಿರುಚೊ ಮೊಟ್ಟೆ

ಕೊಡವಿದ್ದಕ್ಕೇ ಹೊರಳಿ ಕೆಡವಿದಕ್ಕೇ ಕೆರಳಿ
ಛಂಗನೆ ಮೇಲೆ ನೆಗೆದು ನೆತ್ತಿಯ ಮೇಲೆ ಕುಣಿದು
ಸರಸರ ಒಳಗೆ ಇಳಿದು ಬತ್ತಿಯ ಹಾಗೆ ಉರಿದು
ಸುಡುಸುಡು ಅಂತು ಮೊಟ್ಟೆ ಸುಟ್ಟಿತವ್ವಾ ಹೊಟ್ಟೆ
ಮಿರ್‍ರನೆ ಮಿಂಚೊ ಮೊಟ್ಟೆ, ನಂಜನು ಉಣಿಸೊ ಮೊಟ್ಟೆ

ಮಾಟವ ಮಾಡಿದೆ ಮಂತ್ರವ ಹಾಕಿದೆ
ಹರಕೆಯ ಹೊತ್ತು ಮುಡಿಪನು ಕಟ್ಟಿದೆ
ಹೋದೆ… ಹೋದೆ… ಅಂದು, ಒಮ್ಮೆಗೆ ಒಳಗೇ ಬಂದು
ಮುಳ್ಳಿನ ಹಾಗೆ ಮೊನೆದೂ, ನಟ್ಟಿತವ್ವಾ ಮೊಟ್ಟೆ
ಮಿರಿಮಿರಿ ಮಿಂಚೊ ಮೊಟ್ಟೆ, ಮೂಜಗ ಮುಕ್ಕಿದ ಮೊಟ್ಟೆ

ಕೆಟ್ಟೇ ಅನಿಸಿತು ಬಿಡುಗಡೆ ಬಯಸಿತು
ಹೃದಯವು ಕಲಿಸಿತು ಅರಿವದು ಉಳಿಸಿತು
ಧೂಪಾ ಹಚ್ಚಿ ದೀಪಾ ಬೆಳಗಿ ಹೂಗಳನೇರಿಸಿ
ತಟ್ಟೆಯಲ್ಲಿಟ್ಟು ಶಿವನಿಗೆ ಕೊಟ್ಟೆ
ಗಲ್ಲವ ಬಡಿದು ಬೆಲ್ಲದ ಮಾತಲಿ ಮೊರೆಯನು ಇಟ್ಟೆ

ಎಲ್ಲೇ ಹುಡುಗಿ ಮೊಟ್ಟೆ? ಎಲ್ಲೇ ಹುಡುಗಿ ಮೊಟ್ಟೆ?
ನನಗೆ ನಾನೆ ಕೇಳುವೆ, ನನಗೆ ನಾನೆ ಹೇಳುವೆ
ಮುಕ್ಕಣ್ಣನಿಗೆ ಕೊಟ್ಟು ಕೈಯ ಮುಗಿದು ಬಿಟ್ಟೆ.
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...