Home / ಕವನ / ಕವಿತೆ / ಬೆರಳು

ಬೆರಳು

ಮೊಗ್ಗಿನ ಹಾಗೆ ಬಾಲ್ಯದ ಬೆರಳು
ಮದಗಜದಂತೆ ಮಧ್ಯದ ಬೆರಳು
ಮಾಗಿತು ಬಾಗಿತು ಮುಪ್ಪಿನ ಬೆರಳು
ಯಾವುದು ಹಿರಿದು? ಯಾವುದು ಕಿರಿದು?
ಹುಟ್ಟಿನ ಬೆರಳು? ಸಾವಿನ ಬೆರಳು?

ಕಣ್ಣನು ಉರಿಸಿತು ಬೆಂಕಿಯ ಬೆರಳು
ಮೂಗನು ಇರಿಸಿತು ಗಾಳಿಯ ಬೆರಳು
ತುಟಿಯನು ತಿದ್ದಿತು ನೀರಿನ ಬೆರಳು
ಕಿವಿ ನಾಲಗೆಯನು ನಭದಾ ಬೆರಳು
ಮೈಯ ಮೂಡಿಸಿತು ಭೂಮಿಯ ಬೆರಳು

ಮೋಹ ಮದ ಮತ್ಸರಗಳನೂ
ಪ್ರೀತಿ ಕರುಣೆ ಕಾಮನೆಗಳನೂ
ಸಂಚು ವಂಚನೆ ಛಲ ಬಲಗಳನೂ
ಹಿಡಿಹಿಡಿ ಅಂದಿತು ಮಾಯೆಯ ಬೆರಳು

ಚಿಮ್ಮಿತು ಚಾಚಿತು ಚಲಿಸಿತು
ಬೀಜದ ಬೆರಳು
ತತ್ತಿಯನಪ್ಪಿತು ತುತ್ತನು ಉಣಿಸಿತು
ತಟ್ಟಿ ಮಲಗಿಸಿತು ತಾಯಿಯ ಬೆರಳು

ಚಂದ್ರನ ಕರೆಯಿತು ಚಪ್ಪಾಳೆ ತಟ್ಟಿತು
ತುತ್ತೂರಿ ಹಿಡಿಯಿತು ಪುಟವದು ತೆರೆಯಿತು
ಚಿತ್ರವ ಬರೆಯಿತು ಮಗುವಿನ ಬೆರಳು

ಮಲ್ಲನ ಮಣಿಸಿತು ಮಲ್ಲಿಗೆ ಮುಡಿಸಿತು
ಕೆನ್ನೆಯ ಸವರಿತು ಕಣ್ಣೀರ ಒರೆಸಿತು
ಕನಸನು ಹೆಣೆಯಿತು ಕವಿತೆಯ ಬರೆಯಿತು
ಬಿನ್ನಾಣ ಮಾಡಿತು ಪ್ರೇಮಿಯ ಬೆರಳು

ಕೋವಿಯ ಹಿಡಿಯಿತು ಮದ್ದನು ಸಿಡಿಸಿತು
ತಕ್ಕಡಿ ಹಿಡಿಯಿತು ತಿಜೋರಿ ತುಂಬಿತು
ಮಕುಟವ ಕಸಿಯಿತು ಮರಳನು ಅಳೆಯಿತು
ಯೌವನದರಳನು ಹುರಿಯಿತು ಬೆರಳು

ಮಣಿಯನು ಎಣಿಸಿತು ಕಪ್ಪರ ಹಿಡಿಯಿತು
ತಾಳವ ಹಾಕಿತು ತಂತಿಯ ಮೀಟಿತು
ಗೀತೆಯ ನುಡಿಸಿತು ಧೂಪವ ಹಚ್ಚಿತು
ನಡುಗಿತು ನರಳಿತು ಮಾಗಿಯ ಬೆರಳು

ಹುಟ್ಟದು ಸವೆಯಿತು ಹಾಯಿಯು ಹರಿಯಿತು
ಹತ್ತೂ ದಿಕ್ಕಿಗೆ ಬೊಂಬಿನ ನೆರಳು
ಕಾಣದ ಬೆರಳೊಂದು ಕೊಳಲನು ನುಡಿಸಿತು
ಹಂಸೆಯ ಹಿಡಿದೆತ್ತಿ ಗಗನಕೆ ಚಿಮ್ಮಿತು
ಝಗ್ಗೆಂದು ಹೊಳೆಯಿತು ಮಿಂಚಿನ ಬೆರಳು.
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...