ಎಲ್ಲಿದೆ ದಂಡೆ, ಯಾರನ್ನು ಕಂಡೆ?

ಕಡಲ ಕರುಳು ಬಳ್ಳಿಯಲ್ಲರಳಿದ ಹೂ-ಮಗನೆ
ಎಲೆ ಎಲೆ ಅಲೆಯೊಳಗಣ ನಿತ್ಯ ಹರಿದ್ವರ್‍ಣನೆ
ಅಂಬಿಗನೆ-
ಹೇಳು ಆ ದಂಡೆಯಲ್ಲೇನಿದೆ?

ಹುಟ್ಟಿನ ಹರಿಕಾರನೆ
ಮತ್ಸ್ಯಕನ್ನಿಕೆಯ ಪ್ರಿಯಕರನೆ
ಅಂಬಿಗನೆ-
ಹೇಳು ಆ ದಂಡೆಯಲ್ಲೇನಿದೆ?

ಸುಳಿಗಾಳಿಯ ಸನ್ಮಿತ್ರನೆ
ಮಳಲ ಮಾನಸ ಪುತ್ರನೆ
ಅಂಬಿಗನೆ ಆ ದಂಡೆಯಲ್ಲೇನಿದೆ?


ನಾನು ಅಂಬಿಗನು
ನಂಬುವೆಯಾ?
ಹಾಗಾದರೆ ಕೇಳು-

ಆ ದಂಡೆಯಲ್ಲೂ….
ಈ ದಂಡೆಯಲ್ಲೇನಿದೆ ಎಂದು
ಕೇಳುತಿಹನು, ನಿನ್ನಂತೆಯೆ ಅವನು
ಸಂಶಯತ್ಮನು- ಅದು ನೀನು!

ಆ ದಂಡೆಯಲ್ಲೂ….
ಹೀಗೆಯೆ ಆಲಿಸಿ ನಗುತಿಹನು
ನನ್ನಂತೆಯೆ ಅವನು ಅಂಬಿಗನು
ಅದು ನಾನು

ಈಗ ಹೇಳು-
ಎಲ್ಲಿದೆ ದಂಡೆ? ಯಾರನ್ನು ಕಂಡೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವರು ಮತ್ತು ನಾವು
Next post ಬದುಕು

ಸಣ್ಣ ಕತೆ

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…