ಎಲ್ಲಿದೆ ದಂಡೆ, ಯಾರನ್ನು ಕಂಡೆ?

ಕಡಲ ಕರುಳು ಬಳ್ಳಿಯಲ್ಲರಳಿದ ಹೂ-ಮಗನೆ
ಎಲೆ ಎಲೆ ಅಲೆಯೊಳಗಣ ನಿತ್ಯ ಹರಿದ್ವರ್‍ಣನೆ
ಅಂಬಿಗನೆ-
ಹೇಳು ಆ ದಂಡೆಯಲ್ಲೇನಿದೆ?

ಹುಟ್ಟಿನ ಹರಿಕಾರನೆ
ಮತ್ಸ್ಯಕನ್ನಿಕೆಯ ಪ್ರಿಯಕರನೆ
ಅಂಬಿಗನೆ-
ಹೇಳು ಆ ದಂಡೆಯಲ್ಲೇನಿದೆ?

ಸುಳಿಗಾಳಿಯ ಸನ್ಮಿತ್ರನೆ
ಮಳಲ ಮಾನಸ ಪುತ್ರನೆ
ಅಂಬಿಗನೆ ಆ ದಂಡೆಯಲ್ಲೇನಿದೆ?


ನಾನು ಅಂಬಿಗನು
ನಂಬುವೆಯಾ?
ಹಾಗಾದರೆ ಕೇಳು-

ಆ ದಂಡೆಯಲ್ಲೂ….
ಈ ದಂಡೆಯಲ್ಲೇನಿದೆ ಎಂದು
ಕೇಳುತಿಹನು, ನಿನ್ನಂತೆಯೆ ಅವನು
ಸಂಶಯತ್ಮನು- ಅದು ನೀನು!

ಆ ದಂಡೆಯಲ್ಲೂ….
ಹೀಗೆಯೆ ಆಲಿಸಿ ನಗುತಿಹನು
ನನ್ನಂತೆಯೆ ಅವನು ಅಂಬಿಗನು
ಅದು ನಾನು

ಈಗ ಹೇಳು-
ಎಲ್ಲಿದೆ ದಂಡೆ? ಯಾರನ್ನು ಕಂಡೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅವರು ಮತ್ತು ನಾವು
Next post ಬದುಕು

ಸಣ್ಣ ಕತೆ

  • ಇರುವುದೆಲ್ಲವ ಬಿಟ್ಟು

    ಕುಮಾರನಿಗೆ ಪಕ್ಕದ ಮನೆಯ ರೆಡಿಯೋದಲ್ಲಿ ಬಸಪ್ಪ ಮಾದರ ಧ್ವನಿ ಕೇಳಿ ಎಚ್ಚರವಾಯ್ತು. ದೇಹಲಿ ಕೇಂದ್ರದಿಂದ ವಾರ್ತೆಗಳು ಬರುತ್ತಿದ್ದವು. ಹಾಸಿಗೆಯಿಂದ ಎದ್ದವನೆ ಕದ ತೆಗೆದ. ಬೆಳಗಿನ ಸೊಗಸು ಕೊರೆವ… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…