ಯಾರದು?

ಯಾರದು! ಯಾರದು!! ಯಾರದು ಸೇನೆ?
ಯಾರಿಗೆ ಬಂದಿದೆ ಉಳಿಯದ ಬೇನೆ? ||
ಹಿಮಗಿರಿಗಳ ನಡು ಪರ್ವತಸಾನು
ತೆಪ್ಪಗೆ ಕುಳಿತಿಹನಲ್ಲಿಯೆ ಶಿವನು ||

ಬೆಂಕಿಯ ಕಣ್ಣನು ಅಡಗಿಸಿಕೊಂಡು
ಉಲುಹಿನ ಸುಳುಹನು ಮಡಗಿಸಿಕೊಂಡು ||
ಧ್ಯಾನದ ಮೌನದ ಆಳದ ತಳದಲಿ
ಸುಳಿವವರಾರೀ ರುದ್ರನ ಬಳಿಯಲಿ? ||

ಹುಚ್ಚಿನ ಬೆಚ್ಚಿನ ಹುಳುಗಳ ತಂಡೇ
ಇಲ್ಲಿಯು ನಡೆಸುತ್ತಿರುವುದು ಬಂಡೇ? ||
ಅಲ್ಲಿದೆ ಗಿರಿಜೆಯ ತವರಿನ ತೇಜ
ವಿದ್ಯುತ್ ಸಂಚಿತ ತವಸಿನ ಓಜ ||

ದುರ್‍ಗಾ ಮಾತೆಯ ಮಕ್ಕಳ ನಾಡು
ಭಾರತವೊಂದಿದೆ ಕ್ಷಿತಿಯಲ್ಲಿ ನೋಡು ||
ಷಣ್ಮುಖ ದಳಪತಿ ನವಿಲೇರಿದರೆ
ದಂಡಿನ ಹಿಂಡೇ ನೆರೆವುದು ಬೇರೆ ||

ಹಸಿವೆಯ ಹುಚ್ಚಿನ ಹೊಟ್ಟೆಯ ಕಿಚ್ಚಿಗೆ
ಕದನಕು ಕೃಷಿಹಿತವೆನಿಸಿದೆ ಹೆಚ್ಚಿಗೆ ||
ಹಗೆತನದಲಿ ನಾವ್ ಸಾವುದು ಬೇಡ
ಬದುಕುಳಿದರೆ ಗೆಳೆಗೆಳೆಯರು ನೋಡ ||

ಯಾಕೀ ಸಾವಿಗೆ ಬಲಿಯಾಗುವಿರಿ ?
ಚೀಣರೆ ತೋಲಗಿದರೇ ಬದುಕುವಿರಿ ||
*****

ಚೀನಾ ಆಕ್ರಮಣ ಸಂದರ್ಭದಲ್ಲಿ ರಚಿಸಿದ್ದು

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಿಠಾಯಿ ಕೊಡುವೆನು ಮಳೆಯಣ್ಣಾ
Next post ಅಂತೂ ಸಾಹಿತಿಯಾಗಿಬಿಟ್ರಲ್ಲಾ……!

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ತ್ರಿಪಾದ

    ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ… Read more…

  • ನಂಬಿಕೆ

    ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ… Read more…