ಬಾಗಿಲ ತೆರೆದು

ಬಾಗಿಲ ತೆರೆದು
ಹೊಂಬೆಳಕನ್ನು ಚೆಲ್ಲುತಲಿ
ಪಿಸು ಮಾತಲ್ಲಿ ಕಿವಿಗೊಟ್ಟು ಕೇಳುತಲಿ ||

ತಳಿರು ತೋರಣ ನಗೆಯ ಬೀರುತಲಿ
ಇಗೋ ಬಂತು ಯುಗಾದಿ
ನವ ಚೈತನ್ಯ ತುಂಬಿ ಬಾಳಿಗ ||

ಬೇವಾಗಿರಲು ಭಾವನೆಯು
ಬೆಲ್ಲವಾಗಿರಲು ಸ್ನೇಹವು
ಬೇವು ಬೆಲ್ಲ ಸವಿದರೆಲ್ಲ
ಬೆರೆತ ಭಾವ ಚೈತನ್ಯವು ||

ಹೊಸ ದಿಗಂತ ಮೂಡಲಿ
ಋತುವು ಹೊಸತಾಗಲಿ
ಬೊಗಸೆ ತುಂಬಿದ ಹೊಸ ಚೇತನಕೆ
ಹೊಸ ರಾಗದ ಹೊಸತಿಗೆ ||

ಹಸಿದ ಹೊಟ್ಟೆಯ ಕೂಗಿಗೆ
ಹೊಸತಾದ ಕಣ್ ನೋಟಕೆ
ಹೊಸತಾಗಿ ಬರಲಿ ಯುಗಾದಿ
ಗುಡಿಸಲಂಗದ ರೂಪಕ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೋಕಾಕ್ ವರದಿ – ೨
Next post ಹಣೆಬರಹ

ಸಣ್ಣ ಕತೆ

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಕರಾಚಿ ಕಾರಣೋರು

    ಮಳೆಗಾಲ ಆರಂಭವಾಯಿತೆಂದರೆ ಕುಂಞಿಕಣ್ಣ ಕುರುಪ್ಪನ ಏಣೆಲು ಗದ್ದೆಗೆ ನೇಜಿ ಕೆಲಸಕ್ಕೆ ಹೋಗಲು ಕಪಿಲಳ್ಳಿಯ ಹೆಂಗಸರು, ಗಂಡಸರು ತುದಿಗಾಲಲ್ಲಿ ಕಾಯುತ್ತಿರುತ್ತಾರೆ. ವರ್ಷವಿಡೀ ವಿಪ್ರರ ಮತ್ತು ವಿಪ್ರಾತಿವಿಪ್ರರ ಆಡಿಕೆ ತೋಟಗಳಲ್ಲಿ… Read more…

  • ಗ್ರಹಕಥಾ

    [ಸತಿಯು ಪತಿಯ ಹಾಗೂ ಪತಿಯು ಸತಿಯ ಮನೋವೃತ್ತಿಗಳನ್ನು ಅರಿತು ಪರಸ್ಪರರು ಪರಸ್ಪರರನ್ನು ಸಂತೋಷಗೊಳಿಸಿದರೆ ಮಾತ್ರ ಸಂಸಾರವು ಉಭಯತರಿಗೂ ಸುಖಮಯವಾಗುತ್ತದೆ ಹೊರತಾಗಿ, ಅವರಲ್ಲಿ ಯಾರಾದರೊಬ್ಬರು ಅಹಂಭಾವದಿಂದ ಪ್ರೇರಿತರಾಗಿ, ಪರರ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…