Home / ಕವನ / ಕವಿತೆ / ಬೆಳ್ಳಾನೆ ಬೆಳದಿಂಗಳು

ಬೆಳ್ಳಾನೆ ಬೆಳದಿಂಗಳು

ಬೆಳ್ಳಾನೆ ಬೆಳದಿಂಗಳು
ಬೆಳ್ಳಿಯ ಕೋಲ್ ಮಿಂಚು
ಬೆಳ್ಳಿ ಕುದುರೆ ಏರಿ ಬಂದಾನೆ
ನನ್ನ ಸರದಾರ||ಽಽಽಽ

ಮನಸು ಲಲ್ಲೆಯಾಡಕೊಂಡ್ಯಾವೆ
ಅವನ ನೋಡಿ||ಽಽಽಽ
ಅಂಬರದ ಹೊಂಬೆಳಕಲ್ಲಿ
ಇಬ್ಬನಿಯ ತಂಪಲ್ಲಿ ಜೊತೆಗೂಡಿ
ಆಡಿದ ಆಟದಾಗ
ನಾಚಿ ಮೊಗ್ಗಾದೆನೆ||ಽಽಽಽ

ಗಂಡು: ತಾಸು ಹೊತ್ತಿನ ಚೋರಿ
ಕಣ್ಣ ಮುಚ್ಚಾಲೆ ಆಡಿ
ಕಣ್ಣ್‌ಸನ್ನೆ ನೋಟವ ಬೀರಿ
ಕರೆದಾಳೆ ನನ್ನ ಗೆಳತಿ
ಸುಂಕದ ಕೋಯ್ಲ ಬೆಡಗಿ
ನನ್ನವಳೇಽಽಽಽ ನನ್ನ ಗೆಳತಿ||

ಹೆಣ್ಣು: ತೊಟ್ಟ ಜರಿಯ ಪೇಟ
ಉಟ್ಟ ಪಂಚೆ ರೇಶಿಮೆ
ಕೆಂಪಾನೆ ಹಣೆಯ ತಿಲಕವನಿರಿಸಿ
ಚಿಗುರ ಮೀಸೆ ತಿರುವಿದಾಗ ನನ್ನ ಸರದಾರ
ರಾಜಠೀವಿ ದುಂಡು ಮೊಗದಾಗಽಽಽಽ
ಬಳಿಗೆ ಬಂದಾನೆ ನನ್ನ ಸೆಳೆದಾನೆ
ಮಲ್ಲಿಗೆ ದಂಡೆಯ ಮುಡಿಸ್ಯಾನೆ
ನನ್ನ ನಲ್ಲಾಽಽಽಽ
ಮೆಲ್ಲನೆ ಕೈಯ ಹಿಡಿದ್ಯಾನೆಽಽಽಽ

ಗಂಡು: ಪಚ್ಚೆ ಹಸಿರ ಹಾಸಿಗೆ
ಹೆಜ್ಜೆ ಹೆಜ್ಜೆಯಂದವ ಕೂಡಿ
ಲಜ್ಜೆಯಿಂದಲಿ ಬಳುಕುವ ಪೋರಿ
ಮುದ್ದು ಮೊಗ್ಗ ಅರಳಿ ಲತೆಯಂತೆ
ಮೈದೋರಿಽಽಽಽ
ಮುಂಗುರುಳ ನಗೆ ಬೀರಿ ಸೆಳೆದಾಳೆ
ಸಗ್ಗದ ಸಿರಿಯ ತೋರ್‍ಯಾಳೆ
ಕಾಲ್‌ಗೆಜ್ಜೆ ಹಿಗ್ಗನ್ನು ತಂದು ಮೆರೆಸ್ಯಾಳೇಽಽಽಽ

ಹೆಣ್ಣು: ಸುಗ್ಗಿಯ ಸಿರಿದೋರಿ
ನಡು ಕಟ್ಟೆ ನಗೆ ಬೀರಿ
ರಾಶಿ ರಾಶಿ ಭಾಗ್ಯವ ತಂದಾನೆ
ಮುತ್ತಿನ ಹಾರ ತೊಡಿಸ್ಯಾನೆ
ಸಿರಿದೇವಿವೆ||ಽಽಽಽ
ನನ್ನ ಮನವ ತಣಿಸ್ಯಾನೆ
ತಂದಾನಾನಿ ತಾನಿ ಕುಣಿಸ್ಯಾನೆ

ಗಂಡು: ನಡು ಗೆಜ್ಜೆಡಾಬಿನ ಬಿಂಕದ ಗೆಳತಿ ಬಿನ್ನಾಣಗಿತ್ತಿ
ಸಾಕು ಸಾಕೆಲೆ ಮಾಟಗಾತಿ ಅಂದಗಾತಿ
ಸಂಕರಮಣ ಚಪ್ಪರದಾಗೆ ಮದುವಣಗಿತ್ತಿ
ಹಸನಾದ ಹಸೆ ಮೇಲೆ ನಿಂದವಳೆ
ಹಸಿರಾದ ಬಾಳಿಗೆ ಉಸಿರಾಗು ನನ್ನವಳೆ
ತುಂಬಿದ ಬಾಳಿಗೆ ಹೊನ್ನ ಕಳಶವ ಇಟ್ಟವಳೆಽಽಽಽ

ಹೆಣ್ಣು: ನಿನ್ನ ಮಾತಿಗೆ ಮನ ಸೋತು ನಿಂದೆನೋ
ಹಸೆ ಮಣೆಯ ಏರಿ ಹೊಸತನದ ಬಾಳ್ವೆಗೆ
ಉಷೆಯಾಗಿ ಶಶಿ ನಿನ್ನಲ್ಲಿ ನಾ ಒಂದಾಗಿ ಬರುವೆನೋ
ಬೆಳ್ಳಿ ಕುದರಿ ಏರಿ ಚೈತ್ರದಾ ಹೊನಲಿಗೆ
ನಾ ಮಿಂದು ಬರುವೆನೋಽಽಽಽ
ಭೂ ತಾಯ ಮಡಿಲ ಹೂವಾಗಿ ನಲಿಯುವೆನೋಽಽಽಽ
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...