Home / ಕವನ / ಕವಿತೆ / ಬೆಳ್ಳಾನೆ ಬೆಳದಿಂಗಳು

ಬೆಳ್ಳಾನೆ ಬೆಳದಿಂಗಳು

ಬೆಳ್ಳಾನೆ ಬೆಳದಿಂಗಳು
ಬೆಳ್ಳಿಯ ಕೋಲ್ ಮಿಂಚು
ಬೆಳ್ಳಿ ಕುದುರೆ ಏರಿ ಬಂದಾನೆ
ನನ್ನ ಸರದಾರ||ಽಽಽಽ

ಮನಸು ಲಲ್ಲೆಯಾಡಕೊಂಡ್ಯಾವೆ
ಅವನ ನೋಡಿ||ಽಽಽಽ
ಅಂಬರದ ಹೊಂಬೆಳಕಲ್ಲಿ
ಇಬ್ಬನಿಯ ತಂಪಲ್ಲಿ ಜೊತೆಗೂಡಿ
ಆಡಿದ ಆಟದಾಗ
ನಾಚಿ ಮೊಗ್ಗಾದೆನೆ||ಽಽಽಽ

ಗಂಡು: ತಾಸು ಹೊತ್ತಿನ ಚೋರಿ
ಕಣ್ಣ ಮುಚ್ಚಾಲೆ ಆಡಿ
ಕಣ್ಣ್‌ಸನ್ನೆ ನೋಟವ ಬೀರಿ
ಕರೆದಾಳೆ ನನ್ನ ಗೆಳತಿ
ಸುಂಕದ ಕೋಯ್ಲ ಬೆಡಗಿ
ನನ್ನವಳೇಽಽಽಽ ನನ್ನ ಗೆಳತಿ||

ಹೆಣ್ಣು: ತೊಟ್ಟ ಜರಿಯ ಪೇಟ
ಉಟ್ಟ ಪಂಚೆ ರೇಶಿಮೆ
ಕೆಂಪಾನೆ ಹಣೆಯ ತಿಲಕವನಿರಿಸಿ
ಚಿಗುರ ಮೀಸೆ ತಿರುವಿದಾಗ ನನ್ನ ಸರದಾರ
ರಾಜಠೀವಿ ದುಂಡು ಮೊಗದಾಗಽಽಽಽ
ಬಳಿಗೆ ಬಂದಾನೆ ನನ್ನ ಸೆಳೆದಾನೆ
ಮಲ್ಲಿಗೆ ದಂಡೆಯ ಮುಡಿಸ್ಯಾನೆ
ನನ್ನ ನಲ್ಲಾಽಽಽಽ
ಮೆಲ್ಲನೆ ಕೈಯ ಹಿಡಿದ್ಯಾನೆಽಽಽಽ

ಗಂಡು: ಪಚ್ಚೆ ಹಸಿರ ಹಾಸಿಗೆ
ಹೆಜ್ಜೆ ಹೆಜ್ಜೆಯಂದವ ಕೂಡಿ
ಲಜ್ಜೆಯಿಂದಲಿ ಬಳುಕುವ ಪೋರಿ
ಮುದ್ದು ಮೊಗ್ಗ ಅರಳಿ ಲತೆಯಂತೆ
ಮೈದೋರಿಽಽಽಽ
ಮುಂಗುರುಳ ನಗೆ ಬೀರಿ ಸೆಳೆದಾಳೆ
ಸಗ್ಗದ ಸಿರಿಯ ತೋರ್‍ಯಾಳೆ
ಕಾಲ್‌ಗೆಜ್ಜೆ ಹಿಗ್ಗನ್ನು ತಂದು ಮೆರೆಸ್ಯಾಳೇಽಽಽಽ

ಹೆಣ್ಣು: ಸುಗ್ಗಿಯ ಸಿರಿದೋರಿ
ನಡು ಕಟ್ಟೆ ನಗೆ ಬೀರಿ
ರಾಶಿ ರಾಶಿ ಭಾಗ್ಯವ ತಂದಾನೆ
ಮುತ್ತಿನ ಹಾರ ತೊಡಿಸ್ಯಾನೆ
ಸಿರಿದೇವಿವೆ||ಽಽಽಽ
ನನ್ನ ಮನವ ತಣಿಸ್ಯಾನೆ
ತಂದಾನಾನಿ ತಾನಿ ಕುಣಿಸ್ಯಾನೆ

ಗಂಡು: ನಡು ಗೆಜ್ಜೆಡಾಬಿನ ಬಿಂಕದ ಗೆಳತಿ ಬಿನ್ನಾಣಗಿತ್ತಿ
ಸಾಕು ಸಾಕೆಲೆ ಮಾಟಗಾತಿ ಅಂದಗಾತಿ
ಸಂಕರಮಣ ಚಪ್ಪರದಾಗೆ ಮದುವಣಗಿತ್ತಿ
ಹಸನಾದ ಹಸೆ ಮೇಲೆ ನಿಂದವಳೆ
ಹಸಿರಾದ ಬಾಳಿಗೆ ಉಸಿರಾಗು ನನ್ನವಳೆ
ತುಂಬಿದ ಬಾಳಿಗೆ ಹೊನ್ನ ಕಳಶವ ಇಟ್ಟವಳೆಽಽಽಽ

ಹೆಣ್ಣು: ನಿನ್ನ ಮಾತಿಗೆ ಮನ ಸೋತು ನಿಂದೆನೋ
ಹಸೆ ಮಣೆಯ ಏರಿ ಹೊಸತನದ ಬಾಳ್ವೆಗೆ
ಉಷೆಯಾಗಿ ಶಶಿ ನಿನ್ನಲ್ಲಿ ನಾ ಒಂದಾಗಿ ಬರುವೆನೋ
ಬೆಳ್ಳಿ ಕುದರಿ ಏರಿ ಚೈತ್ರದಾ ಹೊನಲಿಗೆ
ನಾ ಮಿಂದು ಬರುವೆನೋಽಽಽಽ
ಭೂ ತಾಯ ಮಡಿಲ ಹೂವಾಗಿ ನಲಿಯುವೆನೋಽಽಽಽ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...