ಬಾ ಬಾ ಬಾರೆ ಕೋಗಿಲೆ

ಬಾ ಬಾ ಬಾರೆ ಕೋಗಿಲೆ
ಎಲೆ ಮರೆಯಲಿ ಕುಳಿತಿರುವೆ ಏಕೆ||

ಬೆಳದಿಂಗಳ ಕೆಳೆಯಲಿ
ಮಿಥಿಲೆಯು ನಿನ್ನ ಸ್ವಾಗತಿಸಲು
ಸನ್ನದ್ಧವಾಗಿದೆ||

ಒಲವಿನಾಸರೆಯ ಬಾಳಿಗೆ
ಇಂದೇ ಬರುವುದು ಚೈತ್ರ
ನಾಳೆಗಾಗಿ ಕಾಯುವೆ ಏಕೆ||

ಶ್ರೀರಾಮ ಬರುವನೇ ರಘುರಾಮ
ಬಂದಿಹನೆ ಮುನಿಸೇಕೆ ಜಾಣೆ||

ಕಾದಿಹವು ವನಸುಮಗಳು
ನಿನ್ನ ಬರುವಿಕೆಗಾಗಿ
ಅಂತಃಕರಣ ಭಾವವನು ಕೇಳಲು||

ಮೂಡಿಹನೇ ರವಿತೇಜ
ವೈಭವದಿ ಪ್ರಕೃತಿಯು
ನೀನೇಕೆ ಮುನಿಸಿಕೊಂಡಿಹೆ ಹೇಳೆ||

ಸೀತಾ ಸಮೇತ ಲಕ್ಷಣ ಸಹಿತ
ಹನುಮಧ್ವಜರು ಬಂದಿಹರು
ಸ್ವರ್‍ಗವಾಗಿಹ ಮಿಥಿಲಾ
ಕಳೆಗುಂದಿದೆ ನಿನ್ನ ಕಾಣದೆ
ನಿನ್ನ ಹಾಡು ಕೇಳದೆ||

ಜನುಮದಾ ಪುಣ್ಯಫಲ
ಜನ್ಮ ಮುಕ್ತ ಸ್ತ್ರೀ ಧರೆಯು
ಎನ್ನ ಮಾತ ಕೇಳೆ ಹಕ್ಕಿಯು
ಪಂಜರ ಎಂಬ ಮನುಜ
ಮಾತು ಕೇಳಲೇಕೆ||

ದಿಟ್ಟತನ ತೋರಿ ಸ್ವಾರ್‍ಥವನಳಿಸಿ
ನಿಸ್ವಾರ್‍ಥದ ನಿನ್ನ ಸಿರಿತನದ
ದನಿಯ ಇಂಪಿಗೆ ತಣಿಸು ಶ್ರೀರಾಮನ||

ಕೊಟ್ಟಾರೆ ಕೊಡುವನು ನಿನ್ನ
ದನಿಯ ಕೇಳಿ ವರವನು
ಶ್ರೀರಾಮನವ ಕರುಣಾಧೀನ ಪುರುಷೋತ್ತಮನು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪ್ರಶ್ನೆ-ಪ್ರತಿಕ್ರಿಯೆ
Next post ಲಂಚಾವತಾರ

ಸಣ್ಣ ಕತೆ

  • ಕಲಾವಿದ

    "ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಇಬ್ಬರು ಹುಚ್ಚರು

    ಸದಾಶಿವನಿಗೆ ಹೀಗೆ ಹುಚ್ಚನಾಗಿ ಅಲೆಯುವ ಅಗತ್ಯ ಖಂಡಿತಕ್ಕೂ ಇರಲಿಲ್ಲ. ಅವನಿಗೊಂದು ಹಿತ್ತಿಲು ಮನೆಯೂ, ಹಿತ್ತಿಲಲ್ಲಿ ಸಾಕಷ್ಟು ಫಲ ಕೊಡುವ ಗೇರು ಮರಗಳೂ ಇದ್ದವು. ದಿನಕ್ಕೆ ಸಾವಿರ ಬೀಡಿ… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

cheap jordans|wholesale air max|wholesale jordans|wholesale jewelry|wholesale jerseys