ಒಂದೇ ಒಂದು ಮನದಾಳದ ಮಾತು

ಒಂದೇ ಒಂದು
ಮನದಾಳದ ಮಾತೊಂದು
ಪ್ರೀತಿಯೊಂದು ಪ್ರೇಮ
ಪರಾಗಸ್ಪರ್‍ಶ ಒಂದು||

ಮಾತು ಒಂದು
ಜೀವ ಒಂದು
ಸ್ನೇಹ ಸೆರೆಯ
ಬಯಕೆ ನೂರೊಂದು||

ಭಾವನೆಗಳೆಂಬ ಹೂವು
ಒಂದು ಅರಳಿ ಸೆಳೆವ
ನೋಟ ಒಂದು ಮೌನ
ತಾಳಿದ ವಿರಹ ನೂರೆಂಟು||

ಜಗವನು ಮಣಿಸುವ
ಮನುಜನ ಸೆಳೆಯುವ
ಮನವನು ತಣಿಸುವ
ಸಾವಿರ ಬಳುವಳಿ ನಗೆಯು ಒಂದು||

ಬಡತನ ಅಳೆಯುವ
ಸಿರಿತನವ ಕಳೆಯುವ
ಸಪ್ತಸ್ವರ ಹಾಡಿಗೆ ಬದುಕು
ಕಟ್ಟಿ ನಲಿವ ಪ್ರೇಮ
ಪರಾಗಸ್ಪರ್‍ಶ ಒಂದು||

ನಮ್ಮತನದ ಬವಣೆ
ಯಾರಿಗೂ ಬೇಡದ ಕರುಣೆ
ಕೋಟಿ ಸೂರ್‍ಯನ ಕಿರಣವ
ನಪ್ಪಿದ ಕೆಳೆಯ ಸೆಲೆಯು ಒಂದು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಚುನಾವಣೆಯೆಂಬ ಚಂಚಲೆ
Next post ಮನಿ

ಸಣ್ಣ ಕತೆ

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಮೇಷ್ಟ್ರು ರಂಗಪ್ಪ

    ಪ್ರಕರಣ ೫ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ… Read more…

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಸಾವು

    ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…

  • ಮಂಜುಳ ಗಾನ

    ಶ್ರೀ ಸರಸ್ವತಿ ಕಾಲೇಜಿನ ಪಾಠಪ್ರವಚನಗಳ ಬಗ್ಗೆ ಎರಡನೆ ಮಾತಿಲ್ಲ. ಅತ್ಯಂತ ಉತ್ತಮ ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ದೊರಕುತ್ತಿತ್ತು. ಆದರೆ ಈ ಕಾಲೇಜಿನ ವಿಶೇಷವೆಂದರೆ ವಿದ್ಯಾರ್ಥಿಗಳ ಮತ್ತು ಉಪನ್ಯಾಸಕರ… Read more…