ನಮ್ಮ ಊರು ಕನ್ನಡ

ನಮ್ಮ ಊರು ಕನ್ನಡ
ನಮ್ಮ ನೆಲವು ಕನ್ನಡ
ನಾವೇ ನಾವು ಕನ್ನಡಿಗರು||

ಹಚ್ಚಿರಿ ಹಣತೆಯ
ಹಣತೆಯಿಂದ ಹಣತೆಗೆ
ಸಾಲು ಸಾಲು ಬೆಳಗಿರಿ
ನಾವೆ ನಾವು ಆಶಾಕಿರಣಗಳು||

ಸ್ವಾಭಿಮಾನದ ನೆಲವು
ಆತ್ಮಾಭಿಮಾನದ ಬೀಡು
ಕೆಚ್ಚೆದೆಯ ಮಣ್ಣಿನ ಮಕ್ಕಳು
ಕನ್ನಡಾಂಬೆಯ ಕುಲಜರು||

ಸಾವಿರಾರು ಭಾಷೆ ಇರಲಿ
ಯಾರ ತಾಯಿ ಯಾವ ಮಡಿಲು
ಭಾಷೆ ರೀತಿ ನೀತಿ ಇರಲಿ
ಕತ್ತಲು ಬೆಳಕು ಒಂದೇ
ಜಗದಿ ಬೆಳಗುವುದೊಂದೆ ಜ್ಯೋತಿಯು||

ಸುಪ್ರಭಾತ ರವಿಯ ಕಿರಣ
ಕನ್ನಡಮ್ಮ ನೆಲದ ಕರುಣ
ಅನಂತ ದಿಗಂತದಿಂ ಸಾರುತ
ಸಾಗುವ ಕನ್ನಡ ಕನ್ನಡ
ನಾವು ಕನ್ನಡಿಗರೆಂದು
ಕನ್ನಡವು ನಮ್ಮ ಉಸಿರೆಂದೂ ಬಾಳಲಿ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಪುಸ್ತಕದಂಗಡಿಗಳು
Next post ದುಡ್ಡು

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಕೂನನ ಮಗಳು ಕೆಂಚಿಯೂ….

    ಬೊಮ್ಮನಹಳ್ಳಿ ಸಂತೆಯಿಂದ ದಲ್ಲಾಳಿಗೆ ಸಂಚಾಗಾರ ಎಂದು ನೂರು ರೂಪಾಯಿ ಸೇರಿ ಒಂದು ಸಾವಿರದ ಒಂದುನೂರು ಕೊಟ್ಟು ತಂದ ’ಚೆನ್ನಿ’ಕರುಹಾಕಿ ಮೂರು ತಿಂಗಳಲ್ಲಿ ಕೊಟ್ಟಿಗೆಯೊಳಗೆ ಕಾಲು ಜಾರಿ ಬಿದ್ದದ್ದೆ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

cheap jordans|wholesale air max|wholesale jordans|wholesale jewelry|wholesale jerseys