ಮುಗಿದ ಕತೆಗೆ

ಮುಗಿದ ಕತೆಗೆ ತೆರೆಯ ಹಾಕಿ
ಬಾಳ ಪುಟದ ತೆರೆಯ ಬಿಚ್ಚಿ
ಕುಂಚ ಹಿಡಿದು ಬಣ್ಣ ಹಚ್ಚಿ
ಚಿತ್ತಾರ ಬಿಡಿಸಿತು ಚಂಚಲ ಮನಸು ||ಇದು||

ಭಾವಲತೆಯ ದಳವ ಬಿಡಿಸಿ
ಅರಳಿ ಚಂದ ಹೂವ ಮುಡಿಸಿ
ಮುಡಿಯ ಏರಿ ಒಲವ ತೋರಿ
ಮನವ ಸೆಳೆಯಿತು ಚಂಚಲ ಮನಸು ||

ಕತ್ತಲೆಯ ನೀಗಿಸಿ ಬೆತ್ತಲೆ
ಬೆಳಕನಿರಿಸಿ ಅಂಗಳ ಬೆಳಗಿ
ಬೊಗಸೆ ಕಂಗಳನೊಸೆದು ಕಲ್ಪನಾ
ಲಿಂಗವ ಬಯಸಿತು ಚಂಚಲ ಮನಸು ||

ಕನಸು ಕಂಡ ಮನಸಿಗೆ
ನೆನಪು ತಂದ ಹೊಸತಿಗೆ
ಸುಖ ಸೋಪಾನ ನೀಲಚಿತ್ತ
ಓಕುಳೀ ಎರಚಿತು ಚಂಚಲ ಮನಸು ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲವ್ವಲ್ಲಿ ಗೆಲ್ಲೋರು ಲೈಫಲ್ಲಿ ಯಾಕ್ಹೀಗೆ!
Next post ಅಮೃತ

ಸಣ್ಣ ಕತೆ

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಹುಟ್ಟು

    ಶಾದಿ ಮಹಲ್‌ನ ಒಳ ಆವರಣದಲ್ಲಿ ದೊಡ್ಡ ಹಾಲ್‌ನಲ್ಲಿ ಹೆಂಗಸರೆಲ್ಲಾ ಸೇರಿದ್ದರು. ಹೊರಗಡೆ ಹಾಕಿದ್ದ ಶಾಮಿಯಾನದಲ್ಲಿ ಗಂಡಸರು ನೆರೆದಿದ್ದರು. ಒಂದು ಕಡೆಯ ಎತ್ತರವಾದ ವೇದಿಕೆಯ ಮೇಲೆ ಮದುವೆ ಗಂಡು,… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

cheap jordans|wholesale air max|wholesale jordans|wholesale jewelry|wholesale jerseys