ವಸ್ತುನಿಷ್ಠ ವಿಮರ್ಶೆ

ಸಂಜೆ, ತಿಂಡಿಯ ವೇಳೆ ಹೇಳಿ ಕಳಿಸಿದ ಹಾಗೆ
ಗೆಳೆಯರಾಗಮನ. ಎಲ್ಲ ಬಲು ಖುಷಿಯಾಗಿ
ಹರಟೆ ಕೊಚ್ಚುತ್ತ ಕಾದೆವು. ಬಂತು ತುಪ್ಪದಲಿ
ಬೆಂದು ಘಮ ಘಮಿಸುತ್ತ ಬಿಸಿ ಬಿಸೀ ದೋಸೆ.
ಇನ್ನೊಂದು ಮತ್ತೊಂದು ಎಂದು ನಿಸ್ಸಂಕೋಚ
ಕೇಳಿ ಹಾಕಿಸಿಕೊಂಡು ಹೊಡೆದದ್ದೆ ಎಲ್ಲರೂ!
ತೇಗುತ್ತ ಕಾಫಿ ಹೀರುತ್ತ ಮಾತಿನ ನಡುವೆ
ಹೊರಬಂತು ಒಂದೊಂದೇ ವಸ್ತುನಿಷ್ಠ ವಿಮರ್ಶೆ.
“ದೋಸೆಯಾಕಾರ ತಟ್ಟೆಗೆ ಕೊಂಚ ಕಿರಿದಾಯ್ತು”
“ತುಪ್ಪದ್ದು ನೋಡು, ಹೊಟ್ಟೆಗೆ ಕೊಂಚ ಕಷ್ಟವೇ”
“ರೊಟ್ಟಿಹಾಗಲ್ಲ ಇದು ತುಂಬ ಮಿದು, ತುಂಬ ತೆಳು
ತಿಂದದ್ದು ಗೊತ್ತಾಗುವುದೆ ಇಲ್ಲ ಬಲು ಮೋಸ!”

ತಿಂದದ್ದು ನಾಲಿಗೆ ಮಾತಾಡುವುದೂ ನಾಲಿಗೆಯೆ! ಒಂದಕ್ಕೊಂದಕ್ಕೆ
ತಾಳಮೇಳಗಳಿಲ್ಲ; ಇದ್ದರದು ಆದೀತೆ ‘ವಸ್ತುನಿಷ್ಠ ವಿಮರ್ಶೆ’?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಲಂಚ
Next post ಮಾತು ಸುಣ್ಣಾ ಮೌನ ಮಲ್ಲಿಗೆ

ಸಣ್ಣ ಕತೆ

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…