Home / ಕವನ / ಕವಿತೆ / ಅಪ್ಪಯ್ಯ ಬಂದಾನ ಅಬ್ಬಯ್ಯ ಪರುವತಕ

ಅಪ್ಪಯ್ಯ ಬಂದಾನ ಅಬ್ಬಯ್ಯ ಪರುವತಕ

ಓ ನೋಡು ಕೋ ನೋಡು ಹೋ ನೋಡು ಹೈ ನೋಡು
ಅಬ್ಬಯ್ಯನಾ ಬೆಟ್ಟದಪ್ಪಯ್ಯನಾ
ಅಪ್ಪಯ್ಯ ಬಂದಾನ ಅಬ್ಬಯ್ಯ ಮರುವಶಕ
ಅಕ್ಕಯ್ಯ ಅಣ್ಣಯ್ಯ ತಾರಯ್ಯ ತಾ

ಲಕಲಕ್ಕ ಲಕ್ಕಯ್ಯ ಲಕ್ಕೀಯ ಈ ಕೊಳ್ಳ
ಹಕ್ಯಾಗಿ ಹಾರೇನೊ ಬುರ್ರನೆಂದೊ
ಓ ನೋಡು ಶಿವಶಿವಾ ಝಲ್ಲೆಂತೊ ನರನರಾ
ವಿಶ್ವಶಾಂತಿಯ ಭವನ ಝಗ್ಗನೆಂತೊ

ಓ ಕಂಡೆ ಹೋ ಕಂಡೆ ಮುರಳೀಯ ಪಡಕೊಂಡೆ
ಈಶ್ವರನ ಈ ತೇರು ಕಂಡೆ ಕಂಡೆ
ಸತ್ಯಯೋಗದ ಗುಡಿಯ ರಾಜಯೋಗದ ಎಡೆಯ
ಆದಿ ದೇವನ ಸಿರಿಯ ಸಾರಿ ಕಂಡೆ

ಯೋಗ ಯೋಗೇಶ್ವರರು ಕಾಲ ಕಾಲೇಶ್ವರರು
ಸಿದ್ಧ ಸಿದ್ಧರ ಗೆದ್ದ ನವ ಬುದ್ಧರು
ಜಗದ ಸೂರ್ಯರು ಇವರು ಯುಗದ ಸೂರ್ಯರು ಇವರು
ಕುಂಭಕರ್ಣರ ಕೊಂದ ಕಲಿರುದ್ರರು

ಇಲ್ಲಿ ಬಂದ ಮೇಲೆ ಎಲ್ಲಿ ಹೋಗಲು ಬೇಡ
ಗೊಲ್ಲ ಗೂಳಿಯ ಜನುಮ ಜಾರಿಹೋಯ್ತೊ
ಆ ಬುಟ್ಟಿ ಈ ಬುಟ್ಟಿ ಗುಳಬುಟ್ಟಿ ಎಣಿಬುಟ್ಟಿ
ನೂರು ಬುಟ್ಟಿಯ ಪೂಜಿ ತೀರಿಹೋತೊ

ಮುಳ್ಳು ಮಲ್ಲಿಗೆಯಾತು ಕಲ್ಲು ಕೇದಿಗೆಯಾತು
ಓ ಬಂತು ಬಂತೈಯ ಜಾತ್ರಿಕಾಲಾ
ಹುಚ್ಚಯ್ಯನಾ ತೇರು ಕಲಿತೇರು ಹೋತಯ್ಯ
ಬಂತೈ ಬಂತೈಯ ಸತ್ಯಕಾಲಾ

ರೈಲ್ಗಾಡಿ ಹತ್ತೈಯ್ಯ ಭಂವ್ವೆಂದು ಹೋಗಯ್ಯ
ಜೈಯ್ಯೆಂದು ಮುಟ್ಟಯ್ಯ ಮುಕ್ತಿಧಾಮಾ
ಬೈಲ್ಗಾಡಿ ಹತ್ತೈಯ ಬುರ್ರಂತ ಹಾರಯ್ಯ
ಸುರ್ರಂತ ಸಾರಯ್ಯ ಶಾಂತಿಧಾಮಾ

ಅಬ್ಬಯ್ಯ ಪರುವತ = ಆಬೂ ಪರ್ವತ (ರಾಜಸ್ಥಾನ), MT. ABU
ಅಪ್ಪಯ್ಯ = ಸರ್ವ ಆತ್ಮರ ತಂದೆಯಾದ ಪರಮಾತ್ಮ, God.
ಲಕ್ಕೀಕೊಳ್ಳಿ = ನಕ್ಕೀ ಸರೋವರ (Nakki Lake)ಅಬೂ ಪರ್ವತದ ಮೇಲಿನ ಸುಂದರ ಸರೋವರ.
ವಿಶ್ವ ಶಾಂತಿ ಭವನ= Universal Peace Hall. ೩೦೦೦ ಸುಖಾಸನಗಳನ್ನು ಹೊಂದಿದ, ಜಗತ್ತಿನ ಒಂಬತ್ತು ಭಾಷೆಗಳಿಗೆ ಭಾಷಣಗಳನ್ನು
ಭಾಷಾಂತರಿಸಿ ಕೇಳಿಸುವ ಹೇಡ್ ಫೋನ್ ಸೌಕರ್ಯವುಳ್ಳ ಹಾಗೂ ಸ್ಥಳದಲ್ಲಿಯೇ T V, ಪ್ರಸಾರದ ಸೌಲಭ್ಯ ಹೊಂದಿದ ಅತ್ಯಾಧುನಿಕ ಯೋಗದ ಹಾಲ್. ಇದರಲ್ಲಿ ಪ್ರತಿವರ್ಷ World Peace Conference ಜರಗುತ್ತದೆ.
ಅಪ್ಪಯ್ಯನ ರಥ = ಶಿವನ ಸಂದೇಶಕ್ಕೆ ಮಾಧ್ಯಮವಾಗಿರುವ ಶರೀರರಥ. Shiva Baba’s Chariot
ಆದಿದೇವ = ಶಿವನ ಜ್ಞಾನವಾಹನ ಬ್ರಹ್ಮ ಅಥವಾ ಬ್ರಹ್ಮಾ ಬಾಬಾ
ಮುಕ್ತಿಧಾಮ = ಸಕಲ ಆತ್ಮರ ಮೂಲ ಚೈತನ್ಯ ನಲೆ
ಶಾಂತಿಧಾಮ = ಸಕಲ ಆತ್ಮರ ಮೂಲ ಚೈತನ್ಯ ನೆಲೆ
*****

Tagged:

Leave a Reply

Your email address will not be published. Required fields are marked *

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...