ನಿಕರಾಗುವಾ: ಪಾಪಬೋಧೆ

ತಿರುವನಂತಪುರ ೬೬. ಸಾಂಡಿನಿಸ್ಟಾ ಚಳುವಳಿಯ
ಬಗ್ಗೆ ಮಾತಾಡುತ್ತ ನಡೆದಿದ್ದವು.
ಅವಳು ಸೀರೆಯನ್ನು

ಮೊಣಕಾಲತನಕ ಎತ್ತಿಹಿಡಿದಿದ್ದಳು.
ಅಕ್ಕಪಕ್ಕದ ಆಂಗಡಿಬೆಳಕಲ್ಲಿ ಇಬ್ಬರೂ
ಧಾರಾಳ ತೊಯ್ದಿದ್ದೆವು.

ಇಷ್ಟು ವರ್ಷಗಳ ನಂತರ ನನಗೀಗ
ಏಕೆ ಈ ನೆನಪು ಇಷ್ಟು ದೂರದ
ಹೈದರಾಬಾದಿನಲ್ಲಿ ಕುಳಿತು?

ಏಕೆಂದರೆ ನಿಕಾರಾಗುವಾ ಈಗ ಸ್ವತಂತ್ರ-
ಆ ಸಂಜೆ ಮಾತ್ರ ನನ್ನ ಗಮನ
ಬೇರೆ ಕಡೆ ಇತ್ತು.

ಅವಳು ಬೇಕೆಂತಲೆ ಸೀರೆಯನ್ನು
ಹಾಗೆ ಹಿಡಿದಿದ್ದಾಳೆ ಅಂದುಕೊಂಡಿದ್ದೆ
ತಪ್ಪಾಗಿ.

ರಸ್ತೆಯಲ್ಲಿ ಅಲ್ಲಲ್ಲಿ ಕಟ್ಟಿನಿಂತಿದ್ದ
ಮಳೆನೀರ ತಗ್ಗುಗಳನ್ನು
ನಾನೇಕೆ ಮರೆತೆ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಂತೂ ಸಾಹಿತಿಯಾಗಿಬಿಟ್ರಲ್ಲಾ……!
Next post ಕಂಬನಿಯ ಲವಣ

ಸಣ್ಣ ಕತೆ

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಒಲವೆ ನಮ್ಮ ಬದುಕು

    "The best of you is he who behaves best towards the members of his family" (The Holy Prophet) ವಾರದ ಸಂತೆ.… Read more…

  • ಹಳ್ಳಿ…

    ಬಂಗಾರ ಬಣ್ಣದ ಕಾರು, ವೇಗವಾಗಿ... ಅತಿವೇಗವಾಗಿ, ಓಡುತ್ತಿತ್ತು. ರೆವ್ರೊಲೆ ಆವಿಯೊಯು-ವಾ-ಹೊಚ್ಚ ಹೊಸ ಮಾದ್ರಿಯ ಹೊರ, ಒಳಗೆ, ಬಲು ವಿಶಿಷ್ಠ, ವಿನೂತನ, ವಿನ್ಯಾಸದ, ಎಬಿ‌ಎಸ್ ಸಿಸ್ಟಮ್ ಕಾರೆಂದರೆ ಕೇಳಬೇಕೆ?… Read more…